ಶ್ರೀನಗರ: ಭಯೋತ್ಪಾದನೆ ಜೊತೆ ಸಂಪರ್ಕ ಹೊಂದಿದ್ದ ಸುಮಾರು 625 ಮಂದಿಯನ್ನು ಈ ವರ್ಷ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಕಾಶ್ಮೀರವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸುವ ಮಹತ್ವದ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಸಿಕ್ಕ ಯಶಸ್ಸು ಇದಾಗಿದೆ.
ಉಗ್ರರಿಗೆ ಸರಕು ಬೆಂಬಲ, ಶಸ್ತ್ರಾಸ್ತ್ರ ಪೂರೈಕೆ, ಆಶ್ರಯ ಸೇರಿಂದತೆ ಅವರ ಕಾರ್ಯಾಚರಣೆಗಳಿಗೆ ಬೇಕಾದ ಎಲ್ಲಾ ನೆರವುಗಳನ್ನು ನೀಡುತ್ತಿರುವ ಉಗ್ರಗಾಮಿ ಸಹವರ್ತಿಗಳ ವಿರುದ್ಧ ಸಮರ ಸಾರಿರುವ ಭಾರತೀಯ ಭದ್ರತಾ ಪಡೆಗಳು, ಇಂತವರನ್ನು ಬಂಧಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿವೆ.
ಇಂತಹ ಬಂಧಿತರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ಕಾನೂನಿನ ಕಠಿಣ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇದರಿಂದ ಅವರು ದೀರ್ಘಕಾಲದವರೆಗೆ ಬಂಧನದಲ್ಲೇ ಇರುವ ಸಾಧ್ಯತೆ ಹೆಚ್ಚಿರುತ್ತದೆ.
ಕಳೆದ ವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾದ ಅವಂತಿಪೋರಾ ಪ್ರದೇಶದಲ್ಲಿ, ಜೈಶ್-ಎ-ಮೊಹಮ್ಮದ್ಗೆ ಸಂಬಂಧಿಸಿದ ಆರು ಸ್ಥಳೀಯರು ಮತ್ತು ಅಲ್ ಬದ್ರ್ ಗುಂಪಿಗೆ ಸೇರಿದ ನಾಲ್ವರು ಸ್ಥಳೀಯರು ಸೇರಿದಂತೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಹತ್ತು ಉಗ್ರ ಸಹವರ್ತಿಗಳನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿತ್ವವನ್ನು ಕೊನೆಗೊಳಿಸಲು 2017 ರಲ್ಲಿ ಪ್ರಾರಂಭಿಸಲಾದ ‘ಆಪರೇಷನ್ ಆಲ್ ಔಟ್’ ಅಡಿಯಲ್ಲಿ ಸಶಸ್ತ್ರ ಪಡೆಗಳು ವಿಶೇಷವಾಗಿ ದಕ್ಷಿಣ ಕಾಶ್ಮೀರದಲ್ಲಿ ಹಲವಾರು ಉಗ್ರಗಾಮಿ ಜಾಲಗಳನ್ನು ನಿರ್ಮೂಲನೆ ಮಾಡಿದೆ ಮತ್ತು ಬಹುತೇಕ ಎಲ್ಲ ಉನ್ನತ ಉಗ್ರ ಕಮಾಂಡರ್ಗಳನ್ನು ಸಂಹಾರ ಮಾಡಿವೆ. ಉಗ್ರ ಸಹವರ್ತಿಗಳ ವಿರುದ್ಧದ ಕಾರ್ಯಾಚರಣೆಯ ಮೂಲಕ ಉಗ್ರಗಾಮಿತ್ವ ಪರಿಸರ ವ್ಯವಸ್ಥೆಯನ್ನು ಕೆಡವುವ ಪ್ರಯತ್ನ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.