ನವದೆಹಲಿ: ಪೂರ್ವ ಲಡಾಕ್ನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ)ಯಲ್ಲಿನ ಬಿಕ್ಕಟ್ಟನ್ನು ಪರಿಹರಿಸಲು ಚೀನಾದೊಂದಿಗೆ ಭಾರತ ನಡೆಸಿದ ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದ ಮಾತುಕತೆ ಯಾವುದೇ “ಅರ್ಥಪೂರ್ಣ ಪರಿಹಾರ” ನೀಡಲಿಲ್ಲ, ಈಗಲೂ ಅಲ್ಲಿ ಪರಿಸ್ಥಿತಿ ಮೊದಲಿನಂತೆಯೇ ಇದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಬುಧವಾರ ಹೇಳಿದ್ದಾರೆ.
ಮಾಧ್ಯಮಗಳಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ರಕ್ಷಣಾ ಸಚಿವರು, “ಯಥಾಸ್ಥಿತಿ ಮುಂದುವರಿದರೆ, ಸೈನಿಕರ ನಿಯೋಜನೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ಇಂಡೋ-ಚೀನಾ ಗಡಿ ವಿಷಯಗಳ ಕುರಿತು ಈ ತಿಂಗಳ ಆರಂಭದಲ್ಲಿ ವರ್ಕಿಂಗ್ ಮೆಕ್ಯಾನಿಸಮ್ ಫಾರ್ ಕನ್ಸಲ್ಟೇಶನ್ & ಕೋಆರ್ಡಿನೇಷನ್ (ಡಬ್ಲ್ಯುಎಂಸಿಸಿ) ಸಭೆಯನ್ನು ಉಲ್ಲೇಖಿಸಿದ ರಾಜನಾಥ್ ಸಿಂಗ್, ಮುಂದಿನ ಸುತ್ತಿನ ಮಿಲಿಟರಿ ಮಾತುಕತೆಗಳನ್ನು ಯಾವಾಗ ಬೇಕಾದರೂ ನಡೆಸಬಹುದು ಎಂದು ಹೇಳಿದರು.
ಭಾರತ ಮತ್ತು ಚೀನಾ ನಡುವಿನ ಗೊಂದಲವನ್ನು ಕಡಿಮೆ ಮಾಡಲು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆ ನಡೆಯುತ್ತಿರುವುದು ನಿಜ ಎಂದ ಅವರು, ಆದರೆ ಇಲ್ಲಿಯವರೆಗೆ ಯಾವುದೇ ಯಶಸ್ಸು ಸಿಕ್ಕಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಎರಡು ದೇಶಗಳ ನಡುವೆ ಸಂದೇಶಗಳನ್ನು ವಿನಿಮಯ ಮಾಡಲಾಗುತ್ತಿದೆ ಎಂದ ಅವರು, “ಡಿಸೆಂಬರ್ 18 ರಂದು ನಡೆದ ಡಬ್ಲ್ಯುಎಂಸಿಸಿ ಸಭೆಯ ನಂತರ, ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದಲ್ಲಿ ನಿಕಟ ಸಮಾಲೋಚನೆ ನಡೆಸಲು ಎರಡೂ ಕಡೆಯವರು ಒಪ್ಪಿಕೊಂಡಿವೆ. ಅಸ್ತಿತ್ವದಲ್ಲಿರುವ ದ್ವಿಪಕ್ಷೀಯ ಒಪ್ಪಂದಗಳು ಮತ್ತು ಪ್ರೋಟೋಕಾಲ್ಗಳ ಪ್ರಕಾರ, ಮುಂದಿನ ಸುತ್ತಿನ ಹಿರಿಯ ಕಮಾಂಡರ್ಗಳ ಸಭೆಗಳನ್ನು ಶೀಘ್ರದಲ್ಲೇ ನಡೆಸಬೇಕು, ಇದರಿಂದಾಗಿ ಎರಡೂ ಕಡೆಯವರಿಗೆ ಎಲ್ಎಸಿಯಿಂದ ಸೈನ್ಯವನ್ನು ಮುಂಚಿನಂತೆ ಅಥವಾ ಸಂಪೂರ್ಣ ವಿಸರ್ಜಿಸುವತ್ತ ಕೆಲಸ ಮಾಡಲು ಸಾಧ್ಯವಾಗುತ್ತದೆ. ಶಾಂತಿಯನ್ನು ಸಂಪೂರ್ಣವಾಗಿ ಮರುಸ್ಥಾಪಿಸಬಹುದು ಎಂದರು.
ವಿಶ್ವದ ಯಾವುದೇ ವಿಸ್ತರಣಾವಾದಿ ದೇಶವು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಪ್ರಯತ್ನಿಸಿದರೆ, ಯಾವುದನ್ನೂ ಲೆಕ್ಕಿಸದೆ ಭಾರತವು ತನ್ನ ಭೂಮಿಯನ್ನು ಯಾರ ಕೈಗೆ ಹೋಗದಂತೆ ಮಾಡುವ ಶಕ್ತಿ, ಸಾಮರ್ಥ್ಯ ಮತ್ತು ಶಕ್ತಿಯನ್ನು ಹೊಂದಿದೆ. ಆದರೆ ನಾವು ಎಲ್ಲಾ ದೇಶಗಳೊಂದಿಗೆ ಶಾಂತಿಯುತ ಸಂಬಂಧವನ್ನು ಉಳಿಸಿಕೊಳ್ಳಲು ಬಯಸುತ್ತೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.