ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಲ್ಲೇ ಕೌಶಲ್ಯಾಧಾರಿತ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಕೌಶಲ್ಯಕ್ಕೆ ಕೇಂದ್ರ ಸರ್ಕಾರ ಮಹತ್ವ ನೀಡಿದೆ. ಕೌಶಲ್ಯ ತರಬೇತಿಯನ್ನು ಪಡೆದುಕೊಂಡಿರುವ ಯುವ ಜನರಿಗೆ ಉದ್ಯೋಗ ದೊರೆಯುವುದಕ್ಕೆ ಪೂರಕ ವಾತಾವರಣ ನಿರ್ಮಿಸುವ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಮೂರು ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಈ ಒಪ್ಪಂದ ಅನೇಕ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಇರುವ ಅವಶ್ಯಕತೆಗೆ ಪೂರಕವಾಗುವಂತೆ ಯುವಕರಿಗೆ ಉದ್ಯೋಗ ಕೌಶಲ್ಯಗಳ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ ಸರ್ಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಸಾಂಪ್ರದಾಯಿಕ ಶಿಕ್ಷಣದಿಂದ ಹೊರತಾದ ಶಿಕ್ಷಣ ಕ್ರಮವನ್ನು ಅನುಸರಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ. ಜನರಿಗೆ, ದೇಶಕ್ಕೆ ಶಕ್ತಿ ತುಂಬುವ ಶಿಕ್ಷಣ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಾಥಮಿಕ ಹಂತದಿಂದಲೇ ಉದ್ಯೋಗ ಆಧಾರಿತ ಶಿಕ್ಷಣ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.