ಚೆನ್ನೈ: ಭಾರತದ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ ಅವರು ಚೆನ್ನೈನಲ್ಲಿ ಇಂದು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ಶಿವರಾಮಕೃಷ್ಣನ್ ತಮ್ಮ 17 ನೇ ವಯಸ್ಸಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯದ ಮೂಲಕ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದರು. ಒಂಬತ್ತು ಟೆಸ್ಟ್ ಪಂದ್ಯಗಳಲ್ಲಿ ಶಿವರಾಮಕೃಷ್ಣನ್ 26 ವಿಕೆಟ್ ಪಡೆದಿದ್ದರು. ಅವರು 15 ಏಕದಿನ ವಿಕೆಟ್ಗಳನ್ನು ಕಬಳಿಸಿದ್ದಾರೆ.
1987 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾದ ನಂತರ ಶಿವರಾಮಕೃಷ್ಣನ್ ಕ್ರಿಕೆಟ್ ಕಾಮೆಂಟರಿ ಪ್ರಾರಂಭಿಸಿದರು.
ಸೈನಾ ನೆಹ್ವಾಲ್, ಗೌತಮ್ ಗಂಭೀರ್ ಸೇರಿದಂತೆ ಈಗಾಗಲೇ ಸಾಕಷ್ಟು ಮಂದಿ ಕ್ರೀಡಾಪಟುಗಳು ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ಇದೀಗ ಲಕ್ಷ್ಮಣ್ ಈ ಪಟ್ಟಿಗೆ ಹೊಸ ಸೇರ್ಪಡೆಯಾಗಿದ್ದಾರೆ.
Tamil Nadu: Former Indian cricketer Laxman Sivaramakrishnan joins Bharatiya Janata Party in Chennai. https://t.co/bE05u082hx pic.twitter.com/U5arZLrboQ
— ANI (@ANI) December 30, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.