ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಲಾವೆಪೊರಾ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. 18 ಗಂಟೆಗಳ ಕಾಲ ನಡೆದ ಗುಂಡಿನ ಕಾಳಗದ ನಂತರ ಉಗ್ರರನ್ನು ಸಂಹಾರ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾದವು. ಪ್ರಸ್ತುತ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ.
ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಸೇನೆ ಮತ್ತು ಪೊಲೀಸರ ಜಂಟಿ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು. ನಂತರ ಗುಂಡಿನ ಚಕಮಕಿ ಆರಂಭಗೊಂಡಿತು.
ಘಟನೆಯನ್ನು ದೃಢೀಕರಿಸಿರುವ ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ಅವರು, “ಕಾರ್ಯಾಚರಣೆಯಲ್ಲಿ ಮೂವರೂ ಭಯೋತ್ಪಾದಕರು ಹತರಾಗಿದ್ದಾರೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಮತ್ತು ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೀಡಾದ ಭಯೋತ್ಪಾದಕರ ಗುರತನ್ನು ಕಂಡುಹಿಡಿಯಲಾಗುತ್ತಿದೆ” ಎಂದಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಹೇಳುವಂತೆ, “ಭದ್ರತಾ ಪಡೆಗಳ ಜಂಟಿ ತಂಡವು ಶಂಕಿತ ಮನೆಯನ್ನು ಸುತ್ತುವರೆದಿದ್ದರಿಂದ ತಲೆಮರೆಸಿಕೊಂಡ ಭಯೋತ್ಪಾದಕರು ಪಡೆಗಳ ಮೇಲೆ ಗುಂಡು ಹಾರಿಸಿದರು, ಇದರಿಂದ ಪ್ರತೀಕಾರ ಮತ್ತು ಎನ್ಕೌಂಟರ್ ಪ್ರಾರಂಭವಾಯಿತು. ಕತ್ತಲೆಯ ಕಾರಣ ಕಾರ್ಯಾಚರಣೆಯನ್ನು ನಂತರ ಸ್ಥಗಿತಗೊಳಿಸಲಾಯಿತು ಆದರೆ ಎಲ್ಲಾ ಪ್ರದೇಶವು ಇಡೀ ರಾತ್ರಿ ಬಿಗಿಯಾದ ಭದ್ರತೆಯಲ್ಲಿ ಇತ್ತು, ಎಲ್ಲಾ ಪ್ರವೇಶ ಮತ್ತು ನಿರ್ಗಮನ ಸ್ಥಳಗಳನ್ನು ಮುಚ್ಚಲಾಗಿತ್ತು. ಇಂದು ಮತ್ತೆ ಎನ್ಕೌಂಟರ್ ಅರಂಭಗೊಂಡು ಮೂವರು ಭಯೋತ್ಪಾದಕರು ಸಂಹರಿಸಲ್ಪಟ್ಟರು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.