ಬೆಳ್ತಂಗಡಿ: ಇಂದು ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸರಾಗವಾಗಿ ನಡೆಯುತ್ತಿದ್ದ ಮತ ಎಣಿಕೆ ಕಾರ್ಯದಲ್ಲಿ ಕೆಲವರು ಪುಂಡಾಟ ಮೆರೆಯುವ ದುಸ್ಸಾಹಸ ಮಾಡಿದ್ದಾರೆ.
ದಕ್ಷಿಣ ಕನ್ನಡದ ಉಜಿರೆಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ‘ಪಾಕಿಸ್ಥಾನ್ ಜಿಂದಾಬಾದ್’ ಎಂದು ಘೋಷಣೆಯನ್ನು ಕೂಗಿ ಅಟ್ಟಹಾಸ ಮೆರೆದಿದ್ದಾರೆ.
ಎಸ್ಡಿಪಿಬಿ ಬೆಂಬಲಿತ ಅಭ್ಯರ್ಥಿಗಳು ಎರಡು ಸ್ಥಾನಗಳಲ್ಲಿ ಗೆದ್ದ ಹುಮ್ಮಸ್ಸಿನಲ್ಲಿ ಇದ್ದ ಕೆಲವು ಕಿಡಿಗೇಡಿಗಳು ಪಾಕಿಸ್ಥಾನದ ಪರವಾದ ಘೋಷಣೆಗಳನ್ನು ಹಾಕಿದ್ದಾರೆ.
ಈ ಘಟನೆಗೆ ವ್ಯಾಪಕವಾದ ಖಂಡನೆ ವ್ಯಕ್ತವಾಗಿದ್ದು, ಘಟನೆಯನ್ನು ಖಂಡಿಸಿ ಇಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ.
ಎಬಿವಿಪಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಆರು ಗಂಟೆಗೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ. ಅಲ್ಲದೆ ಎಸ್ಡಿಪಿಐ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಜರಗಿಸುವಂತೆ ಆಗ್ರಹಿಸಿದೆ.
ಮೂಲಗಳ ಪ್ರಕಾರ, ಘೋಷಣೆ ಕೂಗಿದ 15 ಮಂದಿಯ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ.
After the ballot count, #SDPI workers lifted up slogan of 'Pakisthan Zindabad' in Belthangady, #Mangalore#ABVP condemns this act of Anti National ideology & We demand GOK to take indispensable action & ban SDPI which is hazardous for integrity of our country#AntiNationalSDPI pic.twitter.com/tEp13TGiYx
— ABVP Karnataka (@ABVPKarnataka) December 30, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.