ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಎಲ್ಲೆ ಮೀರಿದೆ. ಸ್ಥಳೀಯ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಉದ್ರಿಕ್ತ ಜನರ ಗುಂಪು ಖೈಬರ್ ಪಖ್ತುಂಖಾವಾ ಪ್ರಾಂತ್ಯದ ಕರಕ್ ಜಿಲ್ಲೆಯ ಹಿಂದೂ ದೇವಾಲಯವೊಂದನ್ನು ನಾಶಪಡಿಸಿ ಬೆಂಕಿ ಹಚ್ಚಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮತಾಂಧರ ಗುಂಪು ದೇವಾಲಯದ ಗೋಡೆಗಳು ಮತ್ತು ಮೇಲ್ಛಾವಣಿಯನ್ನು ನಾಶಪಡಿಸಿದೆ, ಈ ನೀಚ ಕೃತ್ಯವನ್ನು ಪ್ರಪಂಚದಾದ್ಯಂತದ ಮಾನವ ಹಕ್ಕುಗಳ ಕಾರ್ಯಕರ್ತರು ಕಟುವಾಗಿ ಖಂಡಿಸಿದ್ದಾರೆ.
ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಗಲಭೆಕೋರರು ‘ಅಲ್ಲಾಹು ಅಕ್ಬರ್’ ಎಂದು ಕೂಗುತ್ತಾ ದೇಗುಲವನ್ನು ನಾಶಪಡಿಸಿದ್ದಾರೆ ಆದರೂ ಪೊಲೀಸರು ನೋಡಿಯೂ ನೋಡದಂತೆ ಸುಮ್ಮನಿದ್ದರು ಎಂದು ಹೇಳಲಾಗಿದೆ.
ಈ ದೇವಾಲಯವನ್ನು ವಿಸ್ತರಿಸಲು ಹಿಂದೂಗಳು ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿದ್ದರು. ಆದರೆ ಸ್ಥಳೀಯ ಧರ್ಮಗುರುಗಳು ದೇವಾಲಯವನ್ನು ನಾಶಮಾಡಿದ್ದಾರೆ ಎನ್ನಲಾಗಿದೆ.
ಈ ಕೃತ್ಯದ ಬಗ್ಗೆ ಪೊಲೀಸರು ಮತ್ತು ಸ್ಥಳೀಯ ಆಡಳಿತ ಮೌನವಹಿಸಿದೆ ಎಂದು ಕರಾಚಿಯ ಪತ್ರಕರ್ತರೊಬ್ಬರು ಟ್ವೀಟ್ ಮಾಡಿದ್ದಾರೆ.
“ಇದು ಹೊಸ ಪಾಕಿಸ್ಥಾನ! ಸರ್ಕಾರದ ಆಡಳಿತದಲ್ಲಿರುವ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕಾರಕ್ ಎಂಬ ನಗರದಲ್ಲಿ ಹಿಂದೂ ದೇವಾಲಯವೊಂದು ನಾಶವಾಗಿದೆ. ಪೊಲೀಸರು ಅಥವಾ ಸ್ಥಳೀಯ ಪಡೆಗಳು ಈ ಜನರನ್ನು ತಡೆಯಲಿಲ್ಲ ಏಕೆಂದರೆ, ಅವರು ಅಲ್ಲಾಹ್-ಒ-ಅಕ್ಬರ್ ಎಂದು ಜಪಿಸುತ್ತಿದ್ದರು. ಇದೊಂದು ನಾಚಿಕೆಗೇಡಿನ ದಿನ, ಖಂಡನೆಗೂ ಮೀರಿದ್ದೂ” ಎಂದು ಲಂಡನ್ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.