\ನವದೆಹಲಿ: ಕೇಂದ್ರ ಸರ್ಕಾರ ಮತ್ತು ರೈತ ಸಂಘಗಳ ನಡುವೆ ಮುಂದಿನ ಸುತ್ತಿನ ಮಾತುಕತೆ ಜನವರಿ 4 ರಂದು ನಡೆಯಲಿದೆ. ಕೇಂದ್ರವು ನಿನ್ನೆ ನವದೆಹಲಿಯಲ್ಲಿ ರೈತ ಸಂಘಗಳ ಪ್ರತಿನಿಧಿಗಳೊಂದಿಗೆ ಆರನೇ ಸುತ್ತಿನ ಮಾತುಕತೆ ನಡೆಸಿದೆ. ಈ ಸಭೆಯಲ್ಲಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪಿಯೂಷ್ ಗೋಯಲ್ ಮತ್ತು ಸೋಮ ಪ್ರಕಾಶ್ ಉಪಸ್ಥಿತರಿದ್ದರು.
ಸಭೆಯ ನಂತರ ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಮಾತುಕತೆ ಉತ್ತಮ ವಾತಾವರಣದಲ್ಲಿ ನಡೆಯಿತು ಮತ್ತು ಇದು ಸಕಾರಾತ್ಮಕವಾಗಿ ಮುಕ್ತಾಯವಾಯಿತು ಎಂದಿದ್ದಾರೆ.
ರೈತರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ ಮತ್ತು ಸೌಹಾರ್ದಯುತ ಪರಿಹಾರವನ್ನು ಪಡೆಯಲು ಎರಡೂ ಕಡೆಯವರು ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ತೋಮರ್ ರೈತ ಮುಖಂಡರಿಗೆ ಭರವಸೆ ನೀಡಿದರು. ಸಭೆಯಲ್ಲಿ ನಾಲ್ಕು ವಿಷಯಗಳ ಪೈಕಿ ಎರಡರಲ್ಲಿ ಒಮ್ಮತ ಮೂಡಿದೆ ಎಂದು ಅವರು ಹೇಳಿದರು.
ಪರಿಸರಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆ ಮತ್ತು ವಿದ್ಯುತ್ ಕಾಯ್ದೆಗೆ ಸಂಬಂಧಿಸಿದ ವಿಷಯಗಳಲ್ಲಿ ಒಮ್ಮತ ಮೂಡಿದೆ.
ಕೃಷಿ ಸಚಿವರು, ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಮುಂದುವರಿಯಲಿದೆ ಎಂದು ಸರ್ಕಾರ ಹೇಳುತ್ತಿದೆ ಮತ್ತು ಇದನ್ನು ಲಿಖಿತವಾಗಿ ನೀಡಲು ಸಿದ್ಧವಾಗಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.