ಬೆಂಗಳೂರು: ರಾಜ್ಯದಲ್ಲಿ ಆಯುಷ್ ಚಿಕಿತ್ಸಾ ಪದ್ಧತಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಬ್ಬರು ಆಯುಷ್ ವೈದ್ಯರನ್ನು ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ವಿಶ್ವ ಹೋಮಿಯೋಪತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗುಣಮಟ್ಟದ ವೈದ್ಯಕೀಯ ಶಿಕ್ಷಣ ಪದ್ಧತಿ, ಪ್ರಾಥಮಿಕ ಚಿಕಿತ್ಸಾ ಪದ್ಧತಿಗೆ ವಿಶೇಷ ಆದ್ಯತೆ ನೀಡುವ ಸಲುವಾಗಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ. ಅಂತಹ ತಂತ್ರಜ್ಞಾನ ವ್ಯವಸ್ಥೆಯನ್ನು ಶಿಕ್ಷಣ ಸಂಸ್ಥೆಗಳು ಅಳವಡಿಸಿಕೊಳ್ಳುವುದಕ್ಕೂ ಪೂರಕ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ಕಾಲಘಟ್ಟದಲ್ಲಿ ಬದಲಾದ ಜೀವನಶೈಲಿಯ ಕಾರಣದಿಂದಲೇ ಹಲವು ರೋಗಗಳು ಬರುತ್ತಿವೆ. ಆದ್ದರಿಂದ ಉತ್ತಮ ಆಹಾರ ವಿಧಾನದ ಮೂಲಕ ಜೀವನಶೈಲಿಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ ಎನ್ ಮಂಜುನಾಥ್ ಮಾತನಾಡಿ, ಜನರು ತಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುವುದರ ಜೊತೆಗೆ, ಅವರ ಅಪೇಕ್ಷೆ, ನಿರೀಕ್ಷೆಗಳೂ ಬದಲಾಗಿವೆ. ಪ್ರಸ್ತುತ ಸಾಂಕ್ರಾಮಿಕ ರೋಗಗಳ ಜೊತೆಗೆ, ಇನ್ನಿತರ ಕಾಯಿಲೆಗಳಿಂದ ಮೃತಪಡುವವರ ಸಂಖ್ಯೆ ಸಹ ಹೆಚ್ಚಾಗಿದೆ. ಔಷಧಗಳ ಸಂಶೋಧನೆ ಹೆಚ್ಚಾದಂತೆ, ಕಾಯಿಲೆಗಳ ವಿಧಗಳೂ ಅಧಿಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.