ಬೆಂಗಳೂರು: ಕೊರೋನಾ ಸೋಂಕಿನ ಕಾರಣ ಶಾಲೆಗಳಲ್ಲಿ ತರಗತಿ ಆರಂಭವಾಗದಿರುವ ಹಿನ್ನೆಲೆಯಲ್ಲಿ ದೂರದರ್ಶನದ ಚಂದನ ವಾಹಿನಿಯಲ್ಲಿ 8, 9 ಮತ್ತು 10ನೇ ತರಗತಿಯ ಸಂವೇದ ಪಾಠಗಳನ್ನು ಜನವರಿ 4 ರಿಂದ ಮರು ಪ್ರಸಾರ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಈ ಕಾರ್ಯಕ್ರಮವನ್ನು ರೂಪಿಸಿತ್ತು. ಈ ಹಿಂದೆಯೂ 8,9,10 ನೇ ತರಗತಿಯ ಮಕ್ಕಳಿಗೆ ಈ ಮೂಲಕ ತರಗತಿಗಳನ್ನು ನಡೆಸಲಾಗುತ್ತಿತ್ತು. ಇದೀಗ ಮತ್ತೆ ಈ ಕಾರ್ಯಕ್ರಮವನ್ನು ಮರುಪ್ರಸಾರ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲಾಗುವುದಾಗಿ ಅವರು ತಿಳಿಸಿದ್ದಾರೆ.
ಅದರೊಂದಿಗೆ ಜ. 1 ರಿಂದ ರಾಜ್ಯದ ಆರೋಗ್ಯ ಇಲಾಖೆ, ರಾಜ್ಯದ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದ ಜೊತೆಗೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಸೂಕ್ತ ಕೊರೋನಾ ಮುಂಜಾಗ್ರತಾ ಕ್ರಮಗಳ ಜೊತೆಗೆ ಆರಂಭ ಮಾಡಲಾಗುತ್ತದೆ. ಉಳಿದಂತೆ 6, 7, 8 ಮತ್ತು 9 ನೇ ತರಗತಿಗಳ ವಿದ್ಯಾಗಮದ ಮೂಲಕ ಆರಂಭವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.