ಬೆಂಗಳೂರು: ನಗರದ ಪಾದರಾಯನಪುರ ವಾರ್ಡ್ನ ಮುಖ್ಯ ಅಡ್ಡ ರಸ್ತೆಗಳಿಗೆ ಮತ್ತು ವೃತ್ತಗಳಿಗೆ ಸಮಾಜ ಸೇವಕರ ಹೆಸರಿನಲ್ಲಿ ಕೇವಲ ಮುಸ್ಲಿಮರ ಹೆಸರಿಡುವ ಬಿಬಿಎಂಪಿ ನಿರ್ಧಾರಕ್ಕೆ ಬಿಜೆಪಿ ನಾಯಕರು ಸೇರಿದಂತೆ ಇನ್ನಿತರರ ವಿರೋಧ ವ್ಯಕ್ತವಾದ ಬೆನ್ನಲ್ಲೇ, ನಾಮಕರಣ ಪ್ರಕ್ರಿಯೆ ರದ್ದು ಮಾಡುವಂತೆ ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಖಾಸಗಿ ಮಾಧ್ಯಮ ಎಎನ್ಐ ವರದಿ ಪ್ರಕಟಿಸಿದೆ.
ಬಿಬಿಎಂಪಿ ಕೌನ್ಸಿಲ್ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಿದ್ದ ಸಭೆಯಲ್ಲಿ ಪಾದರಾಯನಪುರದ ವಾರ್ಡ್ನ 9 ರಸ್ತೆಗಳು ಹಾಗೂ 2 ವೃತ್ತಗಳಿಗೆ ಸಮಾಜ ಸೇವಕರ ಹೆಸರನ್ನಿಡಲು ನಿರ್ಣಯ ಕೈಗೊಂಡಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿ. 16 ರಂದು ಬಿಬಿಎಂಪಿ ಡಿ. 16 ರಂದು ಪತ್ರಿಕಾ ಪ್ರಕಟಣೆಯ ಮೂಲಕ ಸಾರ್ವಜನಿಕರ ಆಕ್ಷೇಪಣೆಯನ್ನು ಆಹ್ವಾನಿಸಿತ್ತು.
ರಸ್ತೆಗಳಿಗೆ ಸಮಾಜ ಸುಧಾರಕರ ಹೆಸರಿನಲ್ಲಿ ಕೇವಲ ಮುಸ್ಲಿಂ ಸಮುದಾಯದವರ ಹೆಸರನ್ನೇ ಆಯ್ಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಅನಂತ ಕುಮಾರ್ ಹೆಗಡೆ, ತೇಜಸ್ವಿ ಸೂರ್ಯ ಸೇರಿದಂತೆ ಇನ್ನೂ ಅನೇಕರು ಪತ್ರ ಬರೆದು, ಸಾಮಾಜಿಕ ಜಾಲತಾಣಗಳಲ್ಲಿ, ಇ ಮೇಲ್ ಮೂಲಕವೂ ಆಕ್ಷೇಪ, ವಿರೋಧ ವ್ಯಕ್ತಪಡಿಸಿದ್ದರು.
ಹಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಇದೀಗ ನಾಮಕರಣ ಪ್ರಕ್ರಿಯೆಯನ್ನು ರದ್ದು ಮಾಡುವಂತೆ ಕೋರಿ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಕೋರಿಕೆ ಸಲ್ಲಿಸಿದ್ದಾರೆ.
Karnataka: Bruhat Bengaluru Mahanagara Palike Commissioner writes to Additional Chief Secretary of Urban Development department, asking to cancel the order of naming streets after Muslim leaders in ward 135, Padarayanapura of Bengaluru.
— ANI (@ANI) December 31, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.