ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ನಡುವೆಯೂ ರಾಜ್ಯದ ನರ್ಸಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಭರವಸೆ ಮೂಡಿಸುವ ನಿರ್ಧಾರವೊಂದನ್ನು ಸರ್ಕಾರ ಪ್ರಕಟಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ತರಬೇತಿ ಪಡೆದ 1000 ದಾದಿಯರನ್ನು ಬ್ರಿಟನ್ಗೆ ಕಳುಹಿಸಲು ಸಿದ್ಧತೆ ನಡೆಸಿದೆ. ಯುರೋಪ್ ಸೇರಿದಂತೆ ಹಲವು ದೇಶಗಳಲ್ಲಿ ಭಾರತೀಯ ದಾದಿಯರಿಗೆ ಹೆಚ್ಚಿನ ಬೇಡಿಕೆ ಇದೆ. ಅಲ್ಲಿನ ಅನೇಕ ಆಸ್ಪತ್ರೆಗಳು ಉದ್ಯೋಗ ಒದಗಿಸುವುದಕ್ಕೂ ಮುಂದೆ ಬಂದಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಮೊದಲ ಬ್ಯಾಚ್ನಲ್ಲಿ 1000 ದಾದಿಯರನ್ನು ಬ್ರಿಟನ್ಗೆ ಕಳುಹಿಸಲಾಗುವುದು. ಇದಕ್ಕಾಗಿ ಉದ್ಯೋಗಕ್ಕಾಗಿ ತೆರಳಲಿರುವ ದಾದಿಯರಿಗೆ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ಸಂವಹನ ಕೌಶಲ್ಯ ಸೇರಿದಂತೆ ವೃತ್ತಿಯಾಧಾರಿತ ತರಬೇತಿಯನ್ನು ನೀಡಲಾಗುತ್ತದೆ ಎಂದು ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಉದ್ಯೋಗ ಪಡೆಯುವವರಿಗೆ ವಾರ್ಷಿಕ 20 ಲಕ್ಷ ಭಾರತೀಯ ಕರೆನ್ಸಿ ವೇತನವನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಒಪ್ಪಂದವನ್ನು ರಾಜ್ಯದ ಕೌಶಲ್ಯ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಆರೋಗ್ಯ ಸೇವೆಗಳು, ಇಂಗ್ಲೆಂಡ್ನ ಆರೋಗ್ಯ ಶಿಕ್ಷಣ ಗಳು ಮಾಡಿಕೊಂಡಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಸರ್ಕಾರವು ವಿದೇಶಗಳಲ್ಲಿ ಉದ್ಯೋಗ ನೀಡುವ ಉದ್ದೇಶದಿಂದ ಅಂತರರಾಷ್ಟ್ರೀಯ ವಲಸೆ ಕೇಂದ್ರವನ್ನು ಸ್ಥಾಪಿಸಿದೆ. ಈ ಕೇಂದ್ರದ ಮೂಲಕವೇ ದಾದಿಯರನ್ನು ಬ್ರಿಟನ್ಗೆ ಕಳುಹಿಸಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಈ ಕೇಂದ್ರವು ವಿದೇಶಕ್ಕೆ ಕಳಿಸಲ್ಪಟ್ಟ ದಾದಿಯರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಕುಂದುಕೊರತೆಗಳನ್ನು ಆಲಿಸುವ, ಅವರ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಕಾರ್ಯ ನಿರ್ವಹಿಸಲಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.