ನವದೆಹಲಿ: 63ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ)ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಭಾಶಯಗಳನ್ನು ಕೋರಿದ್ದಾರೆ ‘ಆತ್ಮನಿರ್ಭರ ಭಾರತ’ ನಿರ್ಮಾಣದಲ್ಲಿ ಡಿಆರ್ಡಿಒದ ಅಸಾಧಾರಣ ತಾಂತ್ರಿಕ ಪ್ರಗತಿಯ ಬಗ್ಗೆ ದೇಶವು ಹೆಮ್ಮೆಪಡುತ್ತಿದೆ ಎಂದು ಹೇಳಿದರು.
“63 ನೇ ಡಿಆರ್ಡಿಒ ದಿನದಂದು, ಡಿಆರ್ಡಿಒ ತಂಡ ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು. ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಅವರ ಅಸಾಧಾರಣ ತಾಂತ್ರಿಕ ಪ್ರಗತಿಗಳು ಮತ್ತು ಸಾಧನೆಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ. 2021 ಮತ್ತು ಮುಂದಿನ ವರ್ಷಗಳಲ್ಲಿ ಅವರಿಗೆ ಇನ್ನೂ ಹೆಚ್ಚಿನ ಯಶಸ್ಸನ್ನು ಹಾರೈಸುತ್ತೇನೆ”. ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಈ ಸಂದರ್ಭದಲ್ಲಿ, ಸ್ಥಳೀಯ ಸುಧಾರಿತ ರಕ್ಷಣಾ ತಂತ್ರಜ್ಞಾನಗಳು ಮತ್ತು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ದೇಶವನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಸಂಕಲ್ಪವನ್ನು ಡಿಆರ್ಡಿಒ ಪುನರುಚ್ಚರಿಸಿದೆ.
ಡಿಆರ್ಡಿಒ ರಕ್ಷಣಾ ಸಚಿವಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗವಾಗಿದ್ದು, ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನಗಳೊಂದಿಗೆ ಭಾರತವನ್ನು ಸಬಲೀಕರಣಗೊಳಿಸುವ ದೃಷ್ಟಿ ಮತ್ತು ನಿರ್ಣಾಯಕ ರಕ್ಷಣಾ ತಂತ್ರಜ್ಞಾನಗಳು ಮತ್ತು ವ್ಯವಸ್ಥೆಗಳಲ್ಲಿ ಸ್ವಾವಲಂಬನೆ ಸಾಧಿಸುವ ಉದ್ದೇಶವನ್ನು ಹೊಂದಿದೆ.
1958 ರಲ್ಲಿ ರೂಪುಗೊಂಡ ಡಿಆರ್ಡಿಒ 10 ಪ್ರಯೋಗಾಲಯಗಳನ್ನು ಹೊಂದಿರುವ ಒಂದು ಸಣ್ಣ ಸಂಘಟನೆಯಾಗಿ ಪ್ರಾರಂಭವಾಯಿತು ಮತ್ತು ಈಗ ವಿವಿಧ ವಿಷಯ ವಿಭಾಗಗಳು, ಪ್ರಯೋಗಾಲಯಗಳ ಸಂಖ್ಯೆ, ಸಾಧನೆಗಳು ಮತ್ತು ನಿಲುವಿನ ದೃಷ್ಟಿಯಿಂದ ಬಹು-ದಿಕ್ಕಿನಲ್ಲಿ ಬೆಳೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.