ನವದೆಹಲಿ: 2021-22ರ ಆರ್ಥಿಕ ವರ್ಷದಲ್ಲಿ ಭಾರತೀಯ ಆರ್ಥಿಕತೆಯು ಶೇಕಡಾ 10ರಷ್ಟು ಪ್ರಗತಿಯಾಗಲಿದೆ ಮತ್ತು ಮುಂದಿನ ವರ್ಷದ ಅಂತ್ಯದ ವೇಳೆಗೆ ಕೋವಿಡ್ -19 ಪೂರ್ವದಲ್ಲಿ ಇದ್ದ ಹಂತಕ್ಕೆ ಚೇತರಿಕೆಯಾಗಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
“2020-21ರ ನಾಲ್ಕನೇ ತ್ರೈಮಾಸಿಕದಲ್ಲಿ ಬೆಳವಣಿಗೆ ಸಕಾರಾತ್ಮಕ ಅಂಕಿ ಅಂಶಗಳಲ್ಲಿದೆ” ಎಂದಿದ್ದಾರೆ
“ರೈತರ ಪ್ರತಿಭಟನೆಯ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಈ ಮೂರು ಕಾನೂನುಗಳ ಸಕಾರಾತ್ಮಕ ಅಂಶಗಳ ಬಗ್ಗೆ ರೈತರಿಗೆ ಅರ್ಥವಾಗುವಂತೆ ಮಾಡಬೇಕಿದೆ ಮತ್ತು ರೈತರು ಪಟ್ಟಭದ್ರ ಹಿತಾಸಕ್ತಿ ಗುಂಪುಗಳಿಂದ ಮೋಸಹೋಗದಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.
“ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಅವರ ಜೀವನದ ಸುಧಾರಣೆಗಾಗಿ ಸರ್ಕಾರ ಸದಾ ಬದ್ಧವಾಗಿದೆ ” ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ವಿರುದ್ಧ ಕೇರಳ ವಿಧಾನಸಭೆ ಮಂಡಿಸಿದ ನಿರ್ಣಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ರಾಜೀವ್ ಕುಮಾರ್ ಅವರು, “ಈ ಪ್ರತಿಭಟನೆ ಪ್ರತಿಭಟನೆಯ ಸಲುವಾಗಿ ನಡೆಯುತ್ತಿದೆ ಎಂದು ನಾನು ಭಾವಿಸುತ್ತೇನೆ. ಈ ಕಾನೂನುಗಳು ದಶಕಗಳಿಂದ ಚರ್ಚೆಯಲ್ಲಿವೆ ಮತ್ತು ಅನೇಕ ಬಾರಿ ವಿರೋಧದ ಪಕ್ಷದಲ್ಲಿ ಇರುವವರು ಇದನ್ನು ಬೆಂಬಲಿಸಿದ್ದಾರೆ. ಪ್ರಸ್ತುತ ರೈತರನ್ನು ದಾರಿತಪ್ಪಿಸಲಾಗುತ್ತಿದೆ, ವಿರೋಧ ಪಕ್ಷದಲ್ಲಿರುವ ಕಾರಣಕ್ಕಾಗಿ ಅವರು ಕಾನೂನು ಅನ್ನು ವಿರೋಧಿಸಬಾರದು. ಈ ರೀತಿಯ ನಿರ್ಣಯವು ದೇಶದ ಮತ್ತು ರೈತರ ಹಿತದೃಷ್ಟಿಯಿಂದ ಕೂಡಿಲ್ಲ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.