ನವದೆಹಲಿ: ತೃತೀಯಲಿಂಗಿಗಳ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಐದು ವರ್ಷಗಳ ಯೋಜನೆಯನ್ನು ರೂಪಿಸಿದೆ. ಅವರಿಗೆ ಜೀವನೋಪಾಯ ಒದಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ, ಕೌಶಲ್ಯ ಕಾರ್ಯಕ್ರಮಗಳು, ಮನೆಗಳ ಸ್ಥಾಪನೆ ಮತ್ತು ಆರೋಗ್ಯ ಉಪಕ್ರಮಗಳು ಸೇರಿದಂತೆ ಇತರ ಉಪಕ್ರಮಗಳನ್ನು ಈ ಯೋಜನೆಯಡಿ ಆರಂಭಿಸಲಾಗುತ್ತದೆ.
ತೃತೀಯ ಲಿಂಗಿ ಸಮುದಾಯವು ಎದುರಿಸುತ್ತಿರುವ ಸಾಮಾಜಿಕ ಕಳಂಕವನ್ನು ಕೊನೆಗೊಳಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿರುವ ಈ ಯೋಜನೆ, ಸಂಸತ್ತಿನಲ್ಲಿ 2019 ರ ನವೆಂಬರ್ನಲ್ಲಿ ತೃತೀಯ ಲಿಂಗಿ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆಯನ್ನು ಅಂಗೀಕರಿಸಿದ ಒಂದು ವರ್ಷದ ನಂತರ ರೂಪುಗೊಂಡಿದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಯೋಜನೆಗಾಗಿ ರೂ. 500 ಕೋಟಿ ಅಂದರೆ ವರ್ಷಕ್ಕೆ ರೂ.100 ಕೋಟಿ ಮೀಸಲಿಟ್ಟಿದೆ. ಇಲ್ಲಿಯವರೆಗೆ, ಸರ್ಕಾರವು ತೃತೀಯ ಲಿಂಗಿಗಳ ಕಲ್ಯಾಣಕ್ಕಾಗಿ ಉದ್ದೇಶಿತ ವಿಧಾನವನ್ನು ಹೊಂದಿರಲಿಲ್ಲ ಮತ್ತು ಸರ್ಕಾರೇತರ ಸಂಸ್ಥೆಗಳಿಂದ ನಡೆಸಲ್ಪಡುವ ವಿವಿಧ ಯೋಜನೆಗಳನ್ನು ಪ್ರತಿವರ್ಷ ರೂ. 10 ಕೋಟಿ ಮೀಸಲಿಟ್ಟಿತ್ತು.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಕಾರ್ಯದರ್ಶಿ ಆರ್. ಸುಬ್ರಹ್ಮಣ್ಯಂ ಅವರು ಹೇಳುವಂತೆ, “ತೃತೀಯ ಲಿಂಗಿ ವ್ಯಕ್ತಿಗಳಿಗೆ ಕಾಯಿದೆಯಲ್ಲಿ ಐದು ಪ್ರಮುಖ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಆರೋಗ್ಯ, ಸಮಾಜ ಕಲ್ಯಾಣ, ಶಿಕ್ಷಣ, ವಸತಿ ಮತ್ತು ಕೌಶಲ್ಯದ ಉಪಕ್ರಮಗಳು ಇವುಗಳಲ್ಲಿ ಸೇರಿವೆ. ಉಪಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ” ಎಂದಿದ್ದಾರೆ.
ಯೋಜನೆಯ ಅವಧಿ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.