ಬೆಂಗಳೂರು: ರಾಜ್ಯದಲ್ಲಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಈ ಯೋಜನೆಯನ್ವಯ ಬೆಂಗಳೂರಿಗೆ ಸಂಬಂಧಿಸಿದಂತೆ ಬೇಕರಿ ವಸ್ತುಗಳು, ಉಡುಪಿಗೆ ಸಂಬಂಧಿಸಿದಂತೆ ಮೀನು ಸೇರಿದಂತೆ ಮತ್ತಿತರ ಸಮುದ್ರಾಹಾರಕ್ಕೆ ಸಂಬಂಧಿಸಿದ ವಸ್ತುಗಳು, ಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದಂತೆ ಈರುಳ್ಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಆ ಜಿಲ್ಲೆಯಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಉತ್ಪನ್ನಗಳು, ಅವುಗಳ ಮಾರುಕಟ್ಟೆಯ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮತ್ಸೋದ್ಯಮ ಸೇರಿದಂತೆ ಇನ್ನಿತರ ಸಮುದ್ರಕ್ಕೆ ಸಂಬಂಧಿಸಿದಂತೆ ಇರುವ ಆಹಾರ ವಸ್ತುಗಳು ಹೆಚ್ಚು ಪ್ರಾಮುಖ್ಯತೆ ಪಡೆದಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ಸೋದ್ಯಮ, ಬೆಂಗಳೂರನ್ನು ಬೇಕರಿ ಉದ್ಯಮಕ್ಕೆ ಸಂಬಂಧಿಸಿದಂತೆ, ಕೊಡಗು ಜಿಲ್ಲೆ, ಮಲೆನಾಡು ಕಾಫಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರು ಗ್ರಾಮೀಣ ಪ್ರದೇಶ ಕೋಳಿ, ಚಿಕ್ಕಮಗಳೂರು ಮಸಾಲೆ ಉತ್ಪನ್ನಗಳು, ಶಿವಮೊಗ್ಗ ಜಿಲ್ಲೆಯನ್ನು ಅನಾನಸು ಉತ್ಪನ್ನಕ್ಕೆ ಸಂಬಂಧಿಸಿದಂತೆ ಸರ್ಕಾರ ಆಯ್ಕೆ ಮಾಡಿದೆ.
ಕಲಬುರ್ಗಿ ಕೆಂಪು ಧಾನ್ಯ, ಮಂಡ್ಯ ಬೆಲ್ಲ, ನಿಂಬೆಗೆ ವಿಜಯಪುರ, ಹಾವೇರಿ ಜಿಲ್ಲೆಗೆ ಸಂಬಂಧಿಸಿದಂತೆ ಮಾವು, ಬ್ಯಾಡಗಿ ಮೆಣಸಿಗೆ ಸಂಬಂಧಿಸಿದಂತೆ ಗದಗ, ಶುಂಠಿಗೆ ಬೀದರ್, ಬಳ್ಳಾರಿಗೆ ಅಂಜೂರ, ಮೈಸೂರು ಬಾಳೇಹಣ್ಣು, ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಸೀಬೇಹಣ್ಣುಗಳನ್ನು ಒಂದು ಜಿಲ್ಲೆ, ಒಂದು ಉತ್ಪನ್ನದಡಿಯಲ್ಲಿ ಆಯ್ಕೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಈ ಪಟ್ಟಿಯನ್ನು ಪಿಎಂ ಎಫ್ಎಂಇ ಯೋಜನೆಯಡಿ ಕೇಂದ್ರ ಸರ್ಕಾರ ಅನುಮೋದನೆಯನ್ನು ಸಹ ನೀಡಿದೆ. ಆಯ್ದ ಉತ್ಪನ್ನಗಳಲ್ಲಿ ಸಣ್ಣ ಉದ್ಯಮಗಳನ್ನು ನಡೆಸುವವರಿಗೆ ಸಾಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಮತ್ತು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸುವುದಕ್ಕೆ ಸಂಬಂಧಿಸಿದಂತೆ ತರಬೇತಿ ಪಡೆಯಲು ಇದು ಸಹಾಯ ಮಾಡಲಿದೆ. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ತರಬೇತುದಾರರು ಇರಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆರಂಭಿಸುವ ಜಿಲ್ಲಾ ಪೋರ್ಟಲ್ಗೆ ಅರ್ಜಿದಾರರು ಆಯ್ಕೆ ಮಾಡಲಾಗಿರುವ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಪ್ರಸ್ತಾಪಗಳನ್ನು ಕಳುಹಿಸಬಹುದಾಗಿದೆ ಎಂದು ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮ ಡೆಕ್ಕನ್ ಹೆರಾಲ್ಡ್ ವರದಿ ಪ್ರಕಟಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.