ಗೋದಾವರಿ: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಾಮತೀರ್ಥಂ ಗ್ರಾಮದಲ್ಲಿ ಭಗವಾನ್ ರಾಮನ ವಿಗ್ರಹವನ್ನು ಅಪವಿತ್ರಗೊಳಿಸಿದ ಮೂರು ದಿನಗಳ ನಂತರ, ಪೂರ್ವ ಗೋದಾವರಿ ಜಿಲ್ಲೆಯಲ್ಲಿನ ರಾಜಮಹೇಂದ್ರರಾಮ್ ನಗರದ ಗಣೇಶ ದೇವಸ್ಥಾನದಲ್ಲಿ ಭಗವಾನ್ ಸುಬ್ರಹ್ಮಣ್ಯೇಶ್ವರ ದೇವರ ವಿಗ್ರಹವನ್ನು ಧ್ವಂಸ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಧ್ವಂಸಕ ಕೃತ್ಯವು ಶುಕ್ರವಾರ ಮುಂಜಾನೆ 3 ಗಂಟೆಯಿಂದ 5 ರ ನಡುವೆ ನಡೆದಿದೇ ಎಂದು ತ್ರೀ ಟೌನ್ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ದುರ್ಗಾ ಪ್ರಸಾದ್ ತಿಳಿಸಿದ್ದಾರೆ.
ಮುಂಜಾನೆ 3 ಗಂಟೆಯವರೆಗೆ ಪೊಲೀಸರು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದರು ಮತ್ತು ಆ ಸಮಯದವರೆಗೆ ಏನೂ ಆಗಿರಲಿಲ್ಲ. ಘಟನೆ ನಂತರ ನಡೆದಿದೆ ಎಂದು ಅವರು ಹೇಳಿದ್ದಾರೆ.
ಪ್ರಸಾದ್ ಹಂಚಿಕೊಂಡ ವಿವರಗಳ ಪ್ರಕಾರ, ಮುಂಜಾನೆ 5 ಗಂಟೆ ಸುಮಾರಿಗೆ ದೇವಾಲಯದ ಅರ್ಚಕರು ಬಂದಾಗ ವಿಗ್ರಹವು ಮುರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಿಸಿಟಿವಿ ಕ್ಯಾಮೆರಾಗಳಿದ್ದರೂ, ಅವುಗಳ ಫೋಕಸ್ ವಿಗ್ರಹದ ಕಡೆಗೆ ಇಲ್ಲದಿರುವುದರಿಂದ ಅದರಿಂದ ಹೆಚ್ಚು ಉಪಯೋಗವಾಗುದಿಲ್ಲ ಎಂದು ಅವರು ಹೇಳಿದ್ದಾರೆ.
“ಇದು ಕೆಲವು ದುಷ್ಕರ್ಮಿಗಳ ದುಷ್ಕೃತ್ಯವೆಂದು ತೋರುತ್ತದೆ” ಎಂದು ಪ್ರಸಾದ್ ಹೇಳಿದ್ದಾರೆ.
ಭಾರತೀಯ ದಂಡ ಸಂಹಿತೆ (ಐಪಿಸಿ) ಯ ಸೆಕ್ಷನ್ 448, 427, 295 ಮತ್ತು 153 (3) ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.