ಬೆಂಗಳೂರು: ಮುಂದಿನ ಬಾರಿ ನಡೆಯುವ ವಿಧಾನ ಸಭಾ ಚುನಾವಣೆಗೆ ಪಕ್ಷದಿಂದ 140 ರಿಂದ 150 ಶಾಸಕರನ್ನು ಗೆಲ್ಲಿಸುವ ಗುರಿ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಬಿಜೆಪಿಯ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರಿಗೆ ತೊಂದರೆಯುಂಟು ಮಾಡುವ ಯಾವುದೇ ಯೋಜನೆಗಳನ್ನು ಜಾರಿ ಮಾಡುವುದಿಲ್ಲ. ಕಸ್ತೂರಿ ರಂಗನ್ ವರದಿ ಜಾರಿಯಾಗಲು ಬಿಡುವುದಿಲ್ಲ. ರೈತರ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಹಾಗೆಯೇ ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರನ್ನು ಕಾನೂನಿನನ್ವಯವೇ ಆಯ್ಕೆ ಮಾಡುವುದಾಗಿಯೂ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಬಿಜೆಪಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಭಾರಿಸಲು ನಮ್ಮ ಪಕ್ಷದ ಕಾರ್ಯಕರ್ತರ ಶ್ರಮವೇ ಕಾರಣ. ಮುಂದಿನ ದಿನಗಳಲ್ಲಿ ನಡೆಯಲಿರುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷ ಪಡೆಯುವ ಯಶಸ್ಸು ವಿಧಾನಸಭಾ ಚುನಾವಣೆಯ ಫಲಿತಾಂಶ ನಿರ್ಧರಿಸಲಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ವಿಶ್ವಮಾನ್ಯ ನಾಯಕನಾಗಿದ್ದು, ದೇಶವನ್ನು ಮಾದರಿ ರಾಷ್ಟ್ರವನ್ನಾಗಿ ಮಾಡಲು ಮುಂದಿನ ಅವಧಿಯಲ್ಲಿಯೂ ಮತ್ತೊಂದು ಬಾರಿ ಪ್ರಧಾನಿಯಾಗಿ ಆಯ್ಕೆಯಾಗಲಿ ಎಂದು ಸಿಎಂ ಆಶಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.