ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬಿಜೆಪಿ ಎಂಎಲ್ಎ ಗಳನ್ನು ಗಮನದಲ್ಲಿಟ್ಟುಕೊಂಡು ಇಂದು ಬೆಳಗ್ಗೆ 11 ಗಂಟೆಯಿಂದ ತೊಡಗಿದಂತೆ ರಾತ್ರಿ 8 ಗಂಟೆಯ ವರೆಗೆ ಮಾತುಕತೆ ನಡೆಸಲಿದ್ದಾರೆ. 11.30 ರಿಂದ ತೊಡಗಿದಂತೆ ಮಧ್ಯಾಹ್ನ 1.30 ರ ವರೆಗೆ ಕಲ್ಯಾಣ ಕರ್ನಾಟಕ ಭಾಗದ ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ರಿಂದ 4 ಗಂಟೆಯವರೆಗೆ ಸೆಂಟ್ರಲ್ ರೀಜನ್ಗೆ ಸಂಬಂಧಿಸಿದ ಶಾಸಕರ ಜೊತೆಗೆ ಮತ್ತು ಸಂಜೆ 6.30 ರಿಂದ 8 ಗಂಟೆಯ ವರೆಗೆ ರಾಜ್ಯದ ಕರಾವಳಿ ಭಾಗದ ಜನಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಭೆಯಲ್ಲಿ ಮುಂದಿನ ಬಜೆಟ್ಗೆ ಸಂಬಂಧಿಸಿದಂತೆ, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಪಡಿಸುವುದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ. ಜೊತೆಗೆ ಶಾಸಕರ ಕುಂದುಕೊರತೆಗೆ ಸಂಬಂಧಿಸಿದಂತೆಯೂ ಚರ್ಚೆ ನಡೆಸಿ, ಅವರ ಸಮಸ್ಯೆಗಳನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆಯೂ ಮಾತುಗಳು ಕೇಳಿ ಬರುತ್ತಿದ್ದವು. ಕಾಂಗ್ರೆಸ್ನನಾಯಕರಾದ ಡಿ. ಕೆ. ಶಿವಕುಮಾರ್ ಸೇರಿದಂತೆ ಇನ್ನಿತರರು ರಾಜ್ಯದಲ್ಲಿ ಜ. 15 ರ ನಂತರದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂಬೆಲ್ಲಾ ಸುಳ್ಳುಗಳನ್ನು ಹರಡುತ್ತಿದ್ದರು. ಆದರೆ ಕಳೆದ ಎರಡು ದಿನಗಳ ಕಾಲ ಶಿವಮೊಗ್ಗದಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕಾರಿಣಿ ಮತ್ತು ಕೋರ್ ಕಮಿಟಿ ಸಭೆಗಳ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆಯೂ ರಾಜ್ಯ ನಾಯಕರು, ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಾಹಿತಿ ನೀಡಿದ್ದು ಯಡಿಯೂರಪ್ಪ ಅವರು ತಮ್ಮ ಆಡಳಿತಾವಧಿಯನ್ನು ಸಂಪೂರ್ಣಗೊಳಿಸಲಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆ ಇಲ್ಲ ಎಂದು ಮಾಹಿತಿ ನೀಡುವ ಮೂಲಕ ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ಉದ್ಭವವಾಗಿದ್ದ ಗೊಂದಲಗಳಿಗಿ ತೆರೆ ಎಳೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.