ಶ್ರೀನಗರ: 2019 ಕ್ಕೆ ಹೋಲಿಸಿದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ 2020 ರಲ್ಲಿ ಶೇಕಡಾ 87.13 ರಷ್ಟು ಕಲ್ಲು ತೂರಾಟದ ಘಟನೆಗಳು ಕುಸಿತ ಕಂಡಿದೆ. 2020 ರಲ್ಲಿ 255 ಕಲ್ಲು ತೂರಾಟ ಘಟನೆಗಳು ನಡೆದಿವೆ ಎಂದು ಜಮ್ಮು ಮತ್ತು ಕಾಶ್ಮಿರದ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. 2019 ರಲ್ಲಿ ನಡೆದ 1,999 ಕಲ್ಲು ತೂರಾಟದ ಘಟನೆಗಳಿಗೆ ಹೋಲಿಸಿದರೆ, ಇದು ತೀರಾ ಕಡಿಮೆಯಾಗಿದೆ.
“ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಚೆನ್ನಾಗಿ ನಿಯಂತ್ರಣದಲ್ಲಿದೆ. 2021 ರ ನಮ್ಮ ಸಂಕಲ್ಪವು ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಲಪಡಿಸುತ್ತದೆ” ಎಂದು ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.
2019 ರಲ್ಲಿ ಸಂಭವಿಸಿದ 1,999 ಕಲ್ಲು ತೂರಾಟ ಘಟನೆಗಳಲ್ಲಿ 1,193 ಘಟನೆಗಳು ಹಿಂದಿನ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ನಡೆದಿವೆ.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಆಗಸ್ಟ್ 5, 2019 ರಂದು 370 ನೇ ವಿಧಿಯನ್ನು ಹಿಂತೆಗೆದುಕೊಂಡಿತು. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಈಗ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ.
ಅಧಿಕಾರಿಗಳ ಪ್ರಕಾರ, 2016 ಕ್ಕೆ ಹೋಲಿಸಿದರೆ 2020 ರಲ್ಲಿ ಕಲ್ಲು ತೂರಾಟ ಘಟನೆಗಳು 90 ಪ್ರತಿಶತದಷ್ಟು ಇಳಿದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.