ಬೆಂಗಳೂರು: ಯುವ ಜನರಲ್ಲಿ ಸಾಮಾಜಿಕ ಸೇವಾ ಪ್ರಜ್ಞೆಯನ್ನು ಜಾಗೃತಗೊಳಿಸುವ ʼಉತ್ತಮನಾಗು-ಉಪಕಾರಿಯಾಗುʼಎಂಬ ಸ್ವಾಮಿ ವಿವೇಕಾನಂದರ ಜೀವನ ಸಂದೇಶವನ್ನು ಸಾರುವ ಬೃಹತ್ ಯುವ ಅಭಿಯಾನ Be Good Do Good-2021 ಜನವರಿ 12 ರಿಂದ 26 ರ ವರೆಗೆ ರಾಜ್ಯಾಧ್ಯಂತ ನಡೆಯಲಿದೆ. ಬೆಂಗಳೂರಿನ ಸಾಮಾಜಿಕ ಸಂಸ್ಥೆ ʼಸಮರ್ಥ ಭಾರತʼಈ ಅಭಿಯಾನವನ್ನು ಆಯೋಜನೆ ಮಾಡಿದೆ.
ಜ. 12 2021 ರಂದು ಸ್ವಾಮಿ ವಿವೇಕಾನಂದರ 158 ನೇ ಜನ್ಮದಿನವಾಗಿದ್ದು, ಈ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಇದರ ಅಂಗವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಾಮಿ ವಿವೇಕಾನಂದರ ಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಅನೇಕ ಯುವಕ- ಯುವತಿಯರು ಸಂಕಲ್ಪ ಮಾಡಲಿದ್ದಾರೆ. ರಾಜ್ಯಾಧ್ಯಂತ ಈ ಅಭಿಯಾನ ಎರಡು ವಾರಗಳ ಕಾಲ ನಡೆಯಲಿದ್ದು ನೂರಾರು ಯುವ ಜನರು ಭಾಗವಹಿಸುವ ನಿರೀಕ್ಷೆಯನ್ನು ಸಹ ಆಯೋಜಕರು ವ್ಯಕ್ತಪಡಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಅನೇಕ ಸಂಘ ಸಂಸ್ಥೆಗಳು, ವಿದ್ಯಾಸಂಸ್ಥೆಗಳು, ಸಾಂಸ್ಕೃತಿಕ ಸಂಘಗಳು, ಅನೇಕ ಗಣ್ಯರು ದನಿಗೂಡಿಸದ್ದಾರೆ. ಯುವ ಜನರನ್ನು ಸಾಮಾಜಿಕ ಕಾರ್ಯಗಳಿಗೆ ಸೆಳೆಯುವತ್ತ ಮಾಡುವದೇ ಇದರ ಉದ್ದೇಶವಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನತೆ ಇದರಲಿ ಪಾಲ್ಗೊಳ್ಳುವಂತೆಯೂ ಆಯೋಜಕರು ಮನವಿ ಮಾಡಿದ್ದಾರೆ. ಈ ಅಭಿಯಾನದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು 9880621824, 9731264009 ಗೆ ಸಂಪರ್ಕಿಸುವಂತೆಯೂ ಆಯೋಜಕರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.