ನವದೆಹಲಿ: ಭಾರತ್ ಬಯೋಟೆಕ್ನ ಕೊರೋನಾ ವೈರಸ್ ಲಸಿಕೆಯ ತುರ್ತು ಬಳಕೆಗೆ ಈಗಾಗಲೇ ಅನುಮೋದನೆ ದೊರೆತಿದೆ. ಆದರೆ ಕೆಲವರು ಮೂರನೇ ಹಂತದ ಪ್ರಯೋಗ ಪೂರ್ಣಗೊಳಿಸದೆ ಲಸಿಕೆಗೆ ಅನುಮೋದನೆ ನೀಡಿರುವುದಕ್ಕೆ ಅಪಸ್ವರ ಎತ್ತಿದ್ದಾರೆ. ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಭಾರತ್ ಬಯೋಟೆಕ್ ಮುಖ್ಯಸ್ಥ ಡಾ. ಕೃಷ್ಣ ಎಲ್ಲಾ ಅವರು, “ನಾವು ಈ ಟೀಕೆಗಳಿಗೆ ಅರ್ಹರಲ್ಲʼ ಎಂದಿದ್ದಾರೆ.
ವರ್ಚುವಲ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಾ. ಎಲ್ಲಾ, ನಮ್ಮ ಕಂಪನಿಯು ಶೇಕಡಾ 200 ರಷ್ಟು ಪ್ರಾಮಾಣಿಕ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದೆ, 16 ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಗಳನ್ನು ಉತ್ಪಾದಿಸಿದ ಸ್ಥಾಪಿತ ದಾಖಲೆಯನ್ನು ಹೊಂದಿದೆ ಮತ್ತು ಎಲ್ಲಾ ಡೇಟಾದೊಂದಿಗೆ ಪಾರದರ್ಶಕವಾಗಿದೆ ಎಂದು ಹೇಳಿದರು.
“ನಮ್ಮ ಅನುಭವದ ಬಗ್ಗೆ ಆರೋಪ ಮಾಡಬೇಡಿ. ನಾವು ಜಾಗತಿಕ ಕಂಪನಿ. 16 ಲಸಿಕೆಗಳನ್ನು ತಯಾರಿಸಿದ್ದೇವೆ. ನಮ್ಮ ಡೇಟಾ ಪಾರದರ್ಶಕವಾಗಿಲ್ಲ ಎಂದು ಹೇಳುವುದು ಸರಿಯಲ್ಲ. ನಾವು ಯುಕೆ ಸೇರಿದಂತೆ ಹಲವು ದೇಶಗಳಲ್ಲಿ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸುತ್ತಿದ್ದೇವೆ. ನಾವು ಭಾರತೀಯ ಕಂಪನಿಯಲ್ಲ, ಆದರೆ ಜಾಗತಿಕ ಕಂಪನಿ “ಎಂದು ಅವರು ಒತ್ತಿ ಹೇಳಿದ್ದಾರೆ.
“ನಾವು ಬಹಳಷ್ಟು ಜರ್ನಲ್ಗಳಲ್ಲಿ ಪ್ರಕಟಿಸಿದ್ದೇವೆ. ಜಿಕಾ ವೈರಸ್ನ್ನು ನಾವು ಮೊದಲು ಗುರುತಿಸಿದ್ದೇವೆ ಮತ್ತು ಜಿಕಾ ಲಸಿಕೆ ಮತ್ತು ಚಿಕನ್ಗುನ್ಯಾ ಲಸಿಕೆಗಾಗಿ ಜಾಗತಿಕ ಪೇಟೆಂಟ್ ಸಲ್ಲಿಸಿದವರಲ್ಲಿ ನಾವು ಮೊದಲಿಗರು. ನಾವು ಡೇಟಾದೊಂದಿಗೆ ಪಾರದರ್ಶಕವಾಗಿಲ್ಲ ಎಂದು ಹೇಳುವುದು ಸರಿಯಲ್ಲ. ನಾವು ಟೀಕೆಗೆ ಅರ್ಹರಲ್ಲ” ಎಂದು ಡಾ.ಎಲ್ಲಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.