ಶಿವಮೊಗ್ಗ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಸರ್ವಾಧಿಕಾರಿ ಧೋರಣೆ ಕಾರಣದಿಂದಲೇ ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ ಮೂಲೆಗುಂಪಾಗಿರುವುದು. ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಹೀನಾಯವಾಗಿ ಸೋಲನ್ನು ಕಂಡಿತ್ತು. ಹೀಗಿದ್ದರೂ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷವನ್ನು ಅಂಕೆಯಲ್ಲಿಡಲು ಸಮರ್ಥವಾದ ನಾಯಕರಿಲ್ಲ ಎಂಬುದಕ್ಕೆ ಉದಾಹರಣೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ಸಿದ್ದರಾಮಯ್ಯ ಅವರ ಕನಸು ನೆರವೇರಲಾರದು. ರಾತ್ರಿ ವೇಳೆ ಕನಸು ಕಾಣುವುದು ಸಾಮಾನ್ಯ. ಸಿದ್ದರಾಮಯ್ಯ ಅವರು ಹಗಲು ವೇಳೆಯಲ್ಲಿಯೂ ಕನಸು ಕಾಣುತ್ತಿದ್ದಾರೆ ಎಂದು ಸಚಿವರು ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ಬಿಜೆಪಿ 60% ಗಳಷ್ಟು ಗೆಲುವನ್ನು ಸಾಧಿಸಿದೆ. ಮುಂದಿನ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿಯೂ ಬಿಜೆಪಿ ಗೆಲ್ಲುವ ಗುರಿ ಇರಿಸಿಕೊಂಡಿದೆ. ಹಾಗೆಯೇ ಮುಂದಿನ ವಿಧಾನಸಭೆಯಲ್ಲಿಯೂ ಪಕ್ಷ ಗೆಲ್ಲುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೆಲವು ದಿನಗಳ ಹಿಂದೆ ವಿಧಾನ ಪರಿಷತ್ನಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆಯೂ ಮಾತನಾಡಿದ ಅವರು, ಆ ಘಟನೆ ಕಪ್ಪುಚುಕ್ಕೆಯೇ ಸರಿ. ಈ ವಿಚಾರವಾಗಿ ಎಲ್ಲರೂ ಕ್ಷಮೆ ಕೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಏನು ಮಾಡಬೇಕು, ಯಾವ ಕ್ರಮ ಕೈಗೊಳ್ಳಬೇಕು ಎಂಬ ಪರಿಹಾರದ ಬಗ್ಗೆ ಯಾರಿಗೂ ಏನೂ ತೋಚುತ್ತಿಲ್ಲ. ಮುಂದಿನ ದಿನಗಳಲ್ಲಿ ಇಂತಹ ದುರಂತಗಳು ನಡೆಯದಂತೆ ಎಚ್ಚರ ವಹಿಸಬೇಕು. ಈ ಘಟನೆಯ ಸತ್ಯಾಂಶ ತನಿಖೆಯಿಂದ ಬಹಿರಂಗವಾಗಲಿರುವುದಾಗಿಯೂ ಸಚಿವರು ಭರವಸೆ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.