ನವದೆಹಲಿ: ಈಗಾಗಲೇ ಭಾರತ ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ತೀವ್ರ ಹೊಡೆತವನ್ನು ಅನುಭವಿಸುತ್ತಿದೆ. ಇದರ ನಡುವೆ ಈಗ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೇರಳ, ಜಮ್ಮು-ಕಾಶ್ಮೀರ, ತಮಿಳುನಾಡು, ಕೇರಳ ಮುಂತಾದ ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಸಾವಿರಾರು ಹಕ್ಕಿಗಳು ಈಗಾಗಲೇ ಸತ್ತು ಹೋಗಿವೆ.
ಹಕ್ಕಿ ಜ್ವರವನ್ನು ತಡೆಗಟ್ಟಲು ಕೇರಳದ ಕೆಲವು ಭಾಗಗಳಲ್ಲಿ ಮಂಗಳವಾರ ಕೋಳಿ ಮತ್ತು ಬಾತುಕೋಳಿಗಳನ್ನು ಕೊಲ್ಲುವ ಪ್ರಕ್ರಿಯೆ ಪ್ರಾರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಜ್ವರ ವರದಿಯಾದ ನಂತರ ವಲಸೆ ಪ್ರಭೇದಗಳಿಂದ ಮಾದರಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ನೆರೆಯ ಕೇರಳದಲ್ಲಿ ವೈರಲ್ ಸೋಂಕು ಹರಡಿದ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡುಗಳಲ್ಲಿ ಕಣ್ಗಾವಲು ಹೆಚ್ಚಿಸಿ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ, ಜ್ವರದಿಂದ ಸುಮಾರು 1,700 ಬಾತುಕೋಳಿಗಳು ಸಾವನ್ನಪ್ಪಿವೆ ಎಂದು ವರದಿಯಾಗಿವೆ.
ಹಕ್ಕಿ ಜ್ವರ ವ್ಯಾಪಿಸದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯದಲ್ಲಿ ಅಧಿಕಾರಿಗಳು ಇದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.