ಮುಂಬೈ: ಟಾಟಾ ಸಂಸ್ಥೆಯ ಮಾಜಿ ಉದ್ಯೋಗಿಯನ್ನು ಭೇಟಿ ಮಾಡುವ ಮೂಲಕ ಉದ್ಯಮಿ ರತನ್ ಟಾಟಾ ಅವರು ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ರತನ್ ಅವರು ಮುಂಬೈನಿಂದ ಪುಣೆಗೆ ತೆರಳಿ ತಮ್ಮ ಸಂಸ್ಥೆಯ ಮಾಜಿ ಉದ್ಯೋಗಿಯ ಯೋಗಕ್ಷೇಮವನ್ನು ವಿಚಾರಿಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ಹಿಂದೆ ಟಾಟಾ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯೋಗೇಶ್ ದೇಸಾಯಿ ಅವರನ್ನು ರತನ್ ಅವರು ಭೇಟಿ ಮಾಡಿದ್ದಾರೆ. ಯೋಗೇಶ್ ಅವರು 26/11 ರಂದು ಮುಂಬೈನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಗೆ ಸಿಲುಕಿ 2 ವರ್ಷಗಳ ಕಾಲ ಅನಾರೋಗ್ಯಕ್ಕೆ ತುತ್ತಾಗಿದ್ದರು. ರತನ್ ಅವರು ತಮ್ಮನ್ನು ಭೇಟಿ ಮಾಡಿರುವ ಚಿತ್ರವನ್ನು ಯೋಗೇಶ್ ಅವರು ಲಿಂಕ್ಡ್ಇನ್ನಲ್ಲಿ ಪೋಸ್ಟ್ ಮಾಡಿದ್ದರು. ಈ ಚಿತ್ರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಸಂಸ್ಥೆಯ ಮುಖ್ಯಸ್ಥ ಮತ್ತು ಉದ್ಯೋಗಿಯ ಬಾಂಧವ್ಯವನ್ನು ಸೂಚಿಸುವ ಈ ಚಿತ್ರ ಎಲ್ಲರ ಗಮನ ಸೆಳೆದಿದೆ.
ಮುಂಬೈ ದಾಳಿಯ ಸಂದರ್ಭದಲ್ಲಿ ಟಾಟಾ ಸಂಸ್ಥೆಯ ಉದ್ಯೋಗಿಗಳಿಗೂ ಗಾಯಗಳಾಗಿದ್ದವು. ಈ ಸಂದರ್ಭದಲ್ಲಿ ದಾಳಿಯಲ್ಲಿ ಗಾಯಗೊಂಡ ತಮ್ಮ 80 ಉದ್ಯೋಗಿಗಳಿಗೆ ಸಂಬಂಧಿಸಿದಂತೆ, ಅವರ ಜೀವಮಾನದ ಸಂಪೂರ್ಣ ವೆಚ್ಚವನ್ನು ಸಂಸ್ಥೆಯೇ ನೋಡಿಕೊಳ್ಳುವ ಭರವಸೆಯನ್ನು ಸಹ ರತನ್ ಟಾಟಾ ನೀಡಿದ್ದರು. ಇದೀಗ ತಮ್ಮ 83 ರ ಇಳಿ ವಯಸ್ಸಿನಲ್ಲಿಯೂ ಮಾಜಿ ಉದ್ಯೋಗಿಯ ಯೋಗಕ್ಷೇಮ ವಿಚಾರಿಸುವ ಮೂಲಕ ರತನ್ ಅವರು ಇತರರಿಗೂ ಮಾದರಿಯಾಗಿದ್ದಾರೆ.
@TataMotors @TCS @TataSky @tatadocomo @tatatrusts @TataSteelLtd https://t.co/Xu58nOyRZL
— RAGHUNANDAN MAACHANA (@RMaachana) January 4, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.