ಬೆಂಗಳೂರು: ಕಾಶ್ಮೀರಕ್ಕೆ ಸಂಬಂಧಿಸಿದಂತೆ ಕಥಾವಸ್ತುವನ್ನೊಳಗೊಂಡ ಕಾದಂಬರಿಕಾರ್ತಿ ಸಹನಾ ವಿಜಯಕುಮಾರ್ ಅವರು ಬರೆದ ಕನ್ನಡ ಕಾದಂಬರಿ ‘ಕಶೀರ’ ಹಿಂದಿ ಮತ್ತು ಆಂಗ್ಲ ಭಾಷೆಗಳಿಗೆ ಅನುವಾದಗೊಂಡಿದ್ದು, ಆಂಗ್ಲ ಆವೃತ್ತಿಯ ಲೋಕಾರ್ಪಣೆ ಕಾರ್ಯಕ್ರಮ ಜ. 7 ರ ಗುರುವಾರದಂದು ಸಂಜೆ 7.30ಕ್ಕೆ ಲೋಕಾರ್ಪಣೆಗೊಳ್ಳಲಿದೆ.
ವರ್ಚುವಲ್ ಲಾಂಚ್ ಕಾರ್ಯಕ್ರಮದ ಮೂಲಕ ಈ ಪುಸ್ತಕ ಬಿಡುಗಡೆ ನಡೆಯಲಿದ್ದು, ಖ್ಯಾತ ಸಾಹಿತಿ ಡಾ. ಎಸ್. ಎಲ್. ಭೈರಪ್ಪ, ಕಾದಂಬರಿಯನ್ನು ಇಂಗ್ಲಿಷ್ ಭಾಷೆಗೆ ಅನುವಾದ ಮಾಡಿದ ಲಂಡನ್ ನಗರವಾಸಿ ಹೇಮಂತ್ ಶಾಂತಿಗ್ರಾಮ, ಜಮ್ಮು-ಕಾಶ್ಮೀರದ ಜಾಗತಿಕ ಮಂಚ್ನ ದಕ್ಷಿಣ ಭಾರತ ವಿಭಾಗ ಸಂಚಾಲಕ ದಿಲೀಪ್ ಕಾಚ್ರೂ ಮತ್ತು ಮೂಲ ಲೇಖಕಿ ಸಹನಾ ವಿಜಯಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಪುಸ್ತಕದ ಪ್ರಕಟಣೆಯ ಜವಾಬ್ದಾರಿಯನ್ನು ಗರುಡ ಪ್ರಕಾಶನ ವಹಿಸಿಕೊಂಡಿದೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ನೇರಪ್ರಸಾರ ಮಾಡಲಿದ್ದು, https://www.youtube.com/watch?v=Z_F2OwABs6M ಮೂಲಕ ಆಸಕ್ತರು ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಕಶೀರ ಕಾದಂಬರಿಯ ಹಿಂದಿ ಅವತರಣಿಕೆ ಓದುವುದಕ್ಕೆ ಈಗಾಗಲೇ ಲಭ್ಯವಿರುವುದಾಗಿಯೂ ಆಯೋಜಕರು ಮಾಹಿತಿಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.