ನವದೆಹಲಿ: ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮುಂಚೆಯೇ ಅಸ್ಸಾಂನಲ್ಲಿ ಕಾಂಗ್ರೆಸ್ಗೆ ದೊಡ್ಡ ಹಿನ್ನಡೆಯಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನಮಾನವನ್ನು ಕಳೆದುಕೊಂಡಿದೆ. ಅಸೆಂಬ್ಲಿ ಸ್ಪೀಕರ್ ಹಿತೇಂದ್ರನಾಥ್ ಗೋಸ್ವಾಮಿ ಅವರು ಅದರ ವಿರೋಧ ಪಕ್ಷದ ಮಾನ್ಯತೆಯನ್ನು ರದ್ದುಪಡಿಸಿದ್ದಾರೆ.
ಇತ್ತೀಚೆಗೆ ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ ನಂತರ, ಸದನದಲ್ಲಿ ಕಾಂಗ್ರೆಸ್ ಬಲವು 20 ಕ್ಕೆ ಇಳಿದಿದೆ, 126 ಸದಸ್ಯರ ವಿಧಾನಸಭೆಯಲ್ಲಿ ಅಗತ್ಯ ಸಂಖ್ಯೆಗಿಂತ ಒಂದು ಕಡಿಮೆ ಇರುವುದರಿಂದ ಅದರ ವಿರೋಧ ಪಕ್ಷದ ಸ್ಥಾನಮಾನ ಅಮಾನ್ಯವಾಗಿದೆ ಎಂದು ಅಸ್ಸಾಂ ವಿಧಾನಸಭೆ ಅಧಿಕಾರಿಗಳು ಹೇಳಿದ್ದಾರೆ.
ಅಸ್ಸಾಂನ ಮಾಜಿ ಪಿಡಬ್ಲ್ಯುಡಿ ಸಚಿವ ಮತ್ತು ಗೋಲಘಾಟ್ನ ಕಾಂಗ್ರೆಸ್ ಶಾಸಕ ಅಜಂತಾ ನಿಯೋಗ್ ಮತ್ತು ಪಕ್ಷದ ಲಖಿಪುರ ಕ್ಷೇತ್ರದ ಶಾಸಕ ರಾಜ್ದೀಪ್ ಗೌವಾಲಾ ಕಳೆದ ವಾರ ಕಾಂಗ್ರೆಸ್ಗೆ ರಾಜೀನಾಮೆ ನೀಡಿ, ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಇಬ್ಬರು ಶಾಸಕರ ನಿರ್ಗಮನ ಮತ್ತು ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಮತ್ತು ಮಾಜಿ ಸ್ಪೀಕರ್ ಪ್ರಣಬ್ ಗೊಗೊಯ್ ಇಬ್ಬರೂ ಸಾವನ್ನಪ್ಪಿದ ನಂತರ, ವಿಧಾನಸಭೆಯಲ್ಲಿ ಕಾಂಗ್ರೆಸ್ ಬಲವು 20 ಕ್ಕೆ ಇಳಿದಿದೆ.
ಪಶ್ಚಿಮ ಬಂಗಾಳ ಮತ್ತು ಕೇರಳದ ಜೊತೆಗೆ ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಅಸ್ಸಾಂ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.