ನವದೆಹಲಿ: ಸಿರಿಯಾದ ರಾಸಾಯನಿಕ ಶಸ್ತ್ರಾಸ್ತ್ರಗಳು ಭಯೋತ್ಪಾದಕರ ಕೈಗೆ ಸಿಗುವ ಸಾಧ್ಯತೆಯ ಬಗ್ಗೆ ಭಾರತ ಎಚ್ಚರಿಕೆ ನೀಡಿದೆ, ನವದೆಹಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಎರಡು ವರ್ಷಗಳ ಅವಧಿಯನ್ನು ಶಾಶ್ವತ ಸದಸ್ಯನಾಗಿ ಪ್ರಾರಂಭಿಸಿದ ನಂತರದ ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ ಭಾರತ ಈ ಎಚ್ಚರಿಕೆಯನ್ನು ನೀಡಿದೆ.
ಯುಎನ್ಗೆ ಭಾರತದ ರಾಯಭಾರಿ ಟಿ.ಎಸ್. ತಿರೂಮೂರ್ತಿ ಮಾತನಾಡಿ, “ಇಂತಹ ಶಸ್ತ್ರಾಸ್ತ್ರಗಳು ಭಯೋತ್ಪಾದಕ ಸಂಘಟನೆಗಳು ಮತ್ತು ವ್ಯಕ್ತಿಗಳ ಕೈಗೆ ಸಿಗುವ ಸಾಧ್ಯತೆಯ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸುತ್ತಿದೆ. ಸಿರಿಯಾದಲ್ಲಿ ದಶಕಗಳ ಕಾಲ ನಡೆದ ಸಂಘರ್ಷದ ಲಾಭವನ್ನು ಭಯೋತ್ಪಾದಕ ಗುಂಪುಗಳು ಪಡೆದುಕೊಂಡಿವೆ ” ಎಂದಿದ್ದಾರೆ.
“ಈ ಭಯೋತ್ಪಾದಕರಿಗೆ ಯಾವುದೇ ಅಭಯವನ್ನು ನೀಡಲು ಅಥವಾ ಈ ಭಯೋತ್ಪಾದಕ ಗುಂಪುಗಳ ವಿರುದ್ಧದ ಹೋರಾಟವನ್ನು ದುರ್ಬಲಗೊಳಿಸಲು ಜಗತ್ತಿಗೆ ಸಾಧ್ಯವಿಲ್ಲ” ಎಂದು ಅವರು ಹೇಳಿದರು.
ಸಿರಿಯನ್ ರಾಸಾಯನಿಕ ಶಸ್ತ್ರಾಸ್ತ್ರಗಳ ಕಾರ್ಯಕ್ರಮದ ನಿರ್ಮೂಲನೆಗೆ ಸಂಬಂಧಿಸಿದಂತೆ ಭದ್ರತಾ ಮಂಡಳಿಯ ನಿರ್ಣಯ ಮತ್ತು ಅದರ ಕಾರ್ಯಕಾರಿ ಮಂಡಳಿಯ ನಿರ್ಧಾರಗಳನ್ನು ಅನುಷ್ಠಾನಗೊಳಿಸುವಲ್ಲಿ ಆರ್ಗನೈಸೇಶನ್ ಫಾರ್ ದಿ ಪ್ರೊಹಿಬಿಷನ್ ಅಫ್ ಕೆಮಿಕಲ್ ವೆಪನ್ಸ್ (ಒಪಿಸಿಡಬ್ಲ್ಯೂ) ಚಟುವಟಿಕೆಗಳ ಕುರಿತು ಇತ್ತೀಚಿನ ವರದಿಯನ್ನು ಭದ್ರತಾ ಮಂಡಳಿ ಮಂಗಳವಾರ ಪ್ರಸ್ತಾಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.