ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಯಿಂದ ತೊಡಗಿದಂತೆ ಉನ್ನತ ಶಿಕ್ಷಣದ ಕೊನೆಯ ಹಂತದ ವರೆಗೆ ವಿದ್ಯಾರ್ಥಿಗಳ ದಾಖಲೆಗಳನ್ನು ಭದ್ರವಾಗಿರಿಸುವ ದೃಷ್ಟಿಯಿಂದ ‘ಶೈಕ್ಷಣಿಕ ಡಿಜಿ ಲಾಕರ್’ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಭ ಸಂಗ್ರಹಾಗಾರದ ಕೇಂದ್ರ ಮಟ್ಟದ ಅಧಿಕಾರಿಗಳು ಮತ್ತು ರಾಜ್ಯದ ಶಿಕ್ಷಣ ಇಲಾಖೆಯ ವಿವಿಧ ಹಂತದ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಯಾರಿಗೂ ತಮ್ಮ ಶೈಕ್ಷಣಿಕ ದಾಖಲೆಗಳು ಕಳೆದು ಹೋಗುತ್ತದೆ ಎಂಬ ಭಯ ಬೇಡ. ಜೊತೆಗೆ ಶೈಕ್ಷಣಿಕ ದಾಖಲೆಗಳು ನಕಲಿಯಾಗುತ್ತವೆ ಎಂಬ ಆತಂಕವೂ ಬೇಕಾಗಿಲ್ಲ. ಈ ಎಲ್ಲಾ ಆತಂಕಗಳನ್ನು ದೂರಗೊಳಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಡಿಜಿಟಲ್ ದಾಖಲೆ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಇದು ರಾಜ್ಯದಲ್ಲಿನ ಶೈಕ್ಷಣಿಕ ಕ್ಷೇತ್ರದಲ್ಲಿನ ಡಿಜಿಟಲೀಕರಣದ ದೃಷ್ಟಿಯಿಂದಲೂ ಮಹತ್ವ ಪಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಶೈಕ್ಷಣಿಕ ವರ್ಷದಿಂದಲೇ ಈ ವ್ಯವಸ್ಥೆಯನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುತ್ತದೆ. ಇದು ಎಲ್ಲಾ ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸುವ ವ್ಯವಸ್ಥೆಯಾಗಿದೆ. ಪ್ರತಿ ವಿದ್ಯಾರ್ಥಿಯೂ ತಮ್ಮ ಆಧಾರ್ ಸಂಖ್ಯೆಗಳ ಮೂಲಕ ನ್ಯಾಷನಲ್ ಅಕಾಡೆಮಿಕ್ ಡೆಪಾಸಿಟರೀ (ಎನ್ಎಡಿ) ವ್ಯವಸ್ಥೆಯ ಪೋರ್ಟಲ್ಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.