ನವದೆಹಲಿ: ದೇಶದ ಗಡಿ ಪ್ರದೇಶವಾದ ಲಡಾಖ್ನಲ್ಲಿ ಭಾಷೆ, ಸಂಸ್ಕೃತಿ ವಿಚಾರಕ್ಕೆ ಸಂಬಂಧಿಸಿದಂತೆ, ಅವುಗಳ ಸಂರಕ್ಷಣೆಗಾಗಿ ಸಮಸ್ಯೆಗಳನ್ನು ಪರಿಹರಿಸಲು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಲಡಾಖ್ನ 10 ನಿಯೋಗಗಳ ಜೊತೆಗೆ ಚರ್ಚೆ ನಡೆಸಲಾಗಿದ್ದು, ಆ ಬಳಿಕ ಈ ಸಮಿತಿಯನ್ನು ರಚನೆ ಮಾಡಲಾಗಿರುವುದಾಗಿಯೂ ಮೂಲಗಳು ಮಾಹಿತಿ ನೀಡಿವೆ.
ಈ ಸಮಿತಿಯು ಲಡಾಖ್ನಲ್ಲಿ ಜನಾಂಗೀಯತೆ, ಭೂಮಿ, ಉದ್ಯೋಗಗಳು, ಅಭಿವೃದ್ಧಿ ಯೋಜನೆಗಳಲ್ಲಿ ಅಲ್ಲಿನ ಜನರ ಭಾಗವಹಿಸುವಿಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಅಧ್ಯಯನ ನಡೆಸಲಿದೆ ಎಂದು ಸರಕಾರ ಮಾಹಿತಿ ನೀಡಿದೆ. ಈ ಸಮಿತಿಯಲ್ಲಿ ಲಡಾಖ್ನಲ್ಲಿನ ಚುನಾಯಿತ ಸದಸ್ಯರು, ಲಡಾಖ್ನ ಏರಿಯಾ ಅಭಿವೃದ್ಧಿ ಪರಿಷತ್ನ ಸದಸ್ಯರು, ಕೇಂದ್ರ ಸರ್ಕಾರದ ಪ್ರತಿನಿಧಿಗಳನ್ನು ಒಳಗೊಂಡಿರಲಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.