ಬೀದರ್: ರಾಜ್ಯದ ಸರ್ವಾಂಗೀಣ ಪ್ರಗತಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ರೂಪಿಸಿಕೊಂಡು, ಆ ಮೂಲಕ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಆ ಮೂಲಕ ಇಡೀ ದೇಶದಲ್ಲಿಯೇ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸುವ ಕನಸನ್ನು ರಾಜ್ಯ ಸರ್ಕಾರ ಹೊಂದಿರುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಅವರು ಬೀದರ್ ನಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ನಿರ್ಮಣವಾಗಿರುವ 100 ಹಾಸಿಗೆಗಳನ್ನು ಒಳಗೊಂಡ ಆಸ್ಪತ್ರೆ ಮತ್ತು ಇನ್ನಿತರ ಕಾಮಗಾರಿಗಳನ್ನು ಉದ್ಘಾಟಿಸಿದ ಅವರು, ಪ್ರಸ್ತುತ ವರ್ಷದಲ್ಲಿ ಕೊರೋನಾ, ಅತಿಯಾಗಿ ಸುರಿದ ಮಳೆಯಿಂದ ಉಂಟಾದ ಹಲವು ಸಮಸ್ಯೆಗಳ ಕಾರಣದಿಂದ ಆರ್ಥಿಕ ಹಿಂಜರಿತವಾಗಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣಗೊಳಿಸುವುದು ಸಾಧ್ಯವಾಗಿಲ್ಲ. ಆದರೆ ಮುಂದಿನ ದಿನಗಳಲ್ಲಿ ಬೀದರ್ ಜಿಲ್ಲೆಯನ್ನೊಳಗೊಂಡಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅಭಿವೃದ್ಧಿ ವಿಚಾರದಲ್ಲಿ ಅಭೂತಪೂರ್ವವಾದ ಯಶಸ್ಸು ಸಾಧಿಸುವಲ್ಲಿ ಸರ್ಕಾರ ಪ್ರಯತ್ನ ನಡೆಸಲಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ ಎಲ್ಲಾ ವರ್ಗದ ಜನರಿಗೂ ಆರೋಗ್ಯ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಮುಂದಿನ 5 ವರ್ಷಗಳಲ್ಲಿ ರಾಜ್ಯಾಂದ್ಯಂತ 125 ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ತೆರೆಯುವ ಗುರಿಯನ್ನು ಹೊಂದಿದೆ. ಗರ್ಭಿಣಿಯರು, ನವಜಾತ ಶಿಶುಗಳು, ಬಾಣಂತಿಯರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ಕ್ರಮವನ್ನು ಕೈಗೊಳ್ಳಲಿದೆ. ಅವರಿಗೆ ಆದ್ಯತೆಯ ಅನುಸಾರ ಗುಣಮಟ್ಟದ ಸೇವೆ ನೀಡುವ ವಿಷಯಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.