ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಲ್ಲಿನ ವ್ಯವಸ್ಥೆಗಳನ್ನು ಪಾರದರ್ಶಕಗೊಳಿಸಲು ಮತ್ತು ಕಡತಗಳ ತ್ವರಿತ ವಿಲೇವಾರಿಗೆ ಅನುಕೂಲವಾಗುವಂತೆ ಇಂದಿನಿಂದ ತೊಡಗಿದಂತೆ ಇ–ಆಫೀಸ್ ತಂತ್ರಾಂಶವನ್ನು ಬಳಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯಮಟ್ಟದ ಜಿಲ್ಲಾ ಧಾರ್ಮಿಕ ಪರಿಷತ್ನ ಸದಸ್ಯರ ಪ್ರಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ, ಗುಡಿ ಮಾಸಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ದೇವಾಲಯಗಳಿಗೆ ಸಂಬಂಧಿಸಿದಂತೆ ಆದ್ಯತೆಯನುಸಾರ ಪೂಜೆ ಪುನಸ್ಕಾರಕ್ಕೆ ಅವಕಾಶ, ಪ್ರತ್ಯೇಕ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು. ರಾಜ್ಯದ ವತಿಯಿಂದ ಮಂತ್ರಾಲಯ, ತಿರುಮಲ, ಶ್ರೀಶೈಲ, ವಾರಣಾಸಿಗಳಿಗೆ ಯಾತ್ರೆಗೆ ತೆರಳುವ ಭಕ್ತಾಧಿಗಳ ವಸತಿಗೂ ಅನುಕೂಲಗಳನ್ನು ಕಲ್ಪಿಸಲಾಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಸಿಎಂ ಯಡಿಯೂರಪ್ಪ ಅವರು ಬಹುಸಂಖ್ಯಾತರ ಭಾವನೆಗಳಿಗೆ ಗೌರವ ನೀಡಿದ್ದಾರೆ. ಮಹಾತ್ಮಾ ಗಾಂಧಿ ಅವರಿಂದ ಹಿಡಿದು ರೈತರವರೆಗೆ ಎಲ್ಲರೂ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗುವುದನ್ನು ಎದುರು ನೋಡುತ್ತಿದ್ದರು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಆರ್ಟ್ ಆಫ್ ಲಿವಿಂಗ್ನ ರವಿಶಂಕರ್ ಗುರೂಜಿ ಸೇರಿದಂತೆ ಇನ್ನೂ ಹಲವು ಗಣ್ಯರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.