ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಸೋಂಕು ರಾಜ್ಯದಲ್ಲಿ ಆರಂಭವಾದ ನಂತರದಲ್ಲಿ ಸ್ಥಗಿತವಾಗಿದ್ದ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರ ಮತ್ತೆ ತೆರೆದಿದೆ. ಹತ್ತನೇ ಮತ್ತು ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ಶಾಲಾರಂಭವನ್ನು ಮಾಡಿದೆ. ಅದರಂತೆಯೇ ಪದವಿಯ ಮೊದಲ ವರ್ಷ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಯನ್ನು ಆರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಯುಜಿಸಿಯ ಅನುಮತಿಯನ್ನು ಕೋರಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು ಮಾಹಿತಿಯನ್ನು ನೀಡಿದ್ದಾರೆ.
ಯುಜಿಸಿ ಈ ಮನವಿಗೆ ಒಪ್ಪಿಗೆ ಸೂಚಿಸಿ, ಹಸಿರು ನಿಶಾನೆ ತೋರಿದ ತಕ್ಷಣದಲ್ಲೇ ಮೊದಲ ಮತ್ತು ಎರಡನೇ ವರ್ಷದ ಪದವಿ ತರಗತಿಗಳನ್ನು ಆರಂಭ ಮಾಡುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಅತಿಥಿ ಉಪನ್ಯಾಸಕರ ಮುಂದುವರಿಕೆಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯಿಂದಲೂ ಸಮ್ಮತಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿಯೂ ಶೀಘ್ರದಲ್ಲೇ ಪ್ರಕ್ರಿಯೆಗಳು ಆರಂಭವಾಗಲಿರುವುದಾಗಿ ಅವರು ತಿಳಿಸಿದ್ದಾರೆ.
ಕಳೆದ 9 ತಿಂಗಳುಗಳಿಂದ ಈ ವರೆಗೆ ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳಿಗೂ ಬ್ರೇಕ್ ಬಿದ್ದಿತ್ತು. ಇದೀಗ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗಿದೆ. ಮುಂದುವರಿದ ಭಾಗವಾಗಿ ಪದವಿಯ ಪ್ರಥಮ ಮತ್ತು ದ್ವಿತೀಯ ವರ್ಷದ ತರಗತಿಗಳನ್ನು ಆರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇದಕ್ಕೆ ಯುಜಿಸಿಯಿಂದ ಸಮ್ಮತಿ ದೊರೆತ ತಕ್ಷಣದಲ್ಲೇ ಕ್ರಮ ಕೈಗೊಳ್ಳಲಾಗುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.