ಬೆಂಗಳೂರು: ರಾಜ್ಯದ ರಾಯಚೂರಿನಲ್ಲಿ ಅತೀ ಹೆಚ್ಚು ಹತ್ತಿ ಬೆಳೆಯಲಾಗುತ್ತಿದ್ದು, ಇಲ್ಲಿ ಹತ್ತಿ ಖರೀದಿ ಮತ್ತು ಸಂಸ್ಕರಣಾ ಕೇಂದ್ರ ತೆರೆಯುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಅವರು ಕೇಂದ್ರ ಜವಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಪತ್ರ ಮುಖೇನ ಮನವಿ ಮಾಡಿಕೊಂಡಿದ್ದಾರೆ.
ರಾಯಚೂರು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಂಸ್ಕರಣಾ ಸೊಸೈಟಿಯ ಮೂಲಕವೇ ಹತ್ತಿ ಖರೀದಿ ಮಾಡಬೇಕು. ಇದೇ ಸ್ಥಳದಲ್ಲಿ ಹತ್ತಿ ಸಂಸ್ಕರಣಾ ಪ್ರಕ್ರಿಯೆಗೂ ಅವಕಾಶವನ್ನು ಕಲ್ಪಸಬೇಕು. ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಆಶಯಗಳಿಗೆ ತಕ್ಕಂತೆ ಕೇಂದ್ರ ಸರ್ಕಾರವೂ ಸಕಾರಾತ್ಮಕವಾಗಿ ಕೆಲಸ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮನವಿಯನ್ನು ಕೇಂದ್ರ ಸಚಿವೆಗೆ ಸಲ್ಲಿಸಲಾಗಿದೆ ಎಂದು ಅವರು ಸದಾನಂದ ಗಡ ಮಾಹಿತಿ ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ ಅವರಿಗೆ ರಾಷ್ಟ್ರೀಯ ಕೃಷಿ ಮಾರುಕಟ್ಟೆ ಒಕ್ಕೂಟದ ನಿರ್ದೇಶನ ಪತಂಗೆ ಜಯವಂತರಾವ್ ಅವರ ನೇತೃತ್ವದ ನಿಯೋಗ ಮನವಿಯನ್ನು ಸಲ್ಲಿಸಿತ್ತು. ಹತ್ತಿಯ ವಿಚಾರದಲ್ಲಿ ರಾಯಚೂರು ಹೆಸರುವಾಸಿಯಾಗಿದ್ದು, ರಾಯಚೂರಿನ ಸೊಸೈಟಿಯಲ್ಲಿ 2 ಸಾವಿರಕ್ಕೂ ಅಧಿಕ ಸದಸ್ಯರಿದ್ದಾರೆ. ಇಲ್ಲಿ ಹತ್ತಿ ಖರೀದಿ ಮತ್ತು ಸಂಸ್ಕರಣೆಗೆ ವ್ಯವಸ್ಥೆ ಕಲ್ಪಿಸಿದರೆ ಹತ್ತಿ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗಲಿರುವುದಾಗಿಯೂ ಈ ನಿಯೋಗ ತಮ್ಮ ಮನವಿಯಲ್ಲಿ ಸದಾನಂದ ಗೌಡರ ಗಮನಕ್ಕೆ ತಂದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.