ಬೆಂಗಳೂರು: ರಾಜ್ಯದ 223 ಕಡೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ಡ್ರೈ ರನ್ ನಡೆಯಲಿದೆ ಎಂದು ಸಚಿವ ಡಾ ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಕೋಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ಅವರ ಜೊತೆಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಕೊರೋನಾ ಸೋಂಕಿಗೆ ಲಸಿಕೆ ಲಭ್ಯವಾದ ತಕ್ಷಣದಲ್ಲೇ ಸಾಗರೋಪಾದಿಯಲ್ಲಿ ಅದನ್ನು ವಿತರಿಸುವ ಕಾರ್ಯ ನಡೆಯಬೇಕಿದೆ ತಿಳಿಸಿದ್ದಾರೆ. ಕೊರೋನಾ ಲಸಿಕೆ ವಿರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ದೊರೆಯಬೇಕಾದ ಎಲ್ಲಾ ಸಹಕಾರಗಳ ಬಗೆಗೂ ಕೇಂದ್ರ ಸಚಿವರಿಗೆ ಮಾಹಿತಿಯನ್ನು ನೀಡಲಾಗಿರುವುದಾಗಿ ಅವರು ತಿಳಿಸಿದ್ದಾರೆ.
ಜ. 8 ರಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಮೂರು ಕಡೆಗಳಲ್ಲಿ ಕೊರೋನಾ ವ್ಯಾಕ್ಸಿನ್ ಡ್ರೈರನ್ ನಡೆಯಬೇಕಿತ್ತು. ಆದರೆ, ರಾಜ್ಯದಲ್ಲಿ 263 ಕಡೆಗಳಲ್ಲಿ ಕೊರೋನಾ ಲಸಿಕೆಯ ಡ್ರೈರನ್ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಸರ್ಕಾರ ಈ ತಾಲೀಮು ನಡೆಸಲು ಪೂರಕ ಸಿದ್ಧತೆಗಳನ್ನು ನಡೆಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದಕ್ಕಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ 24 ಲಕ್ಷ ಸಿರೇಂಜ್ಗಳನ್ನು ಕಳುಹಿಸಿದೆ. ಜೊತೆಗೆ 10 ವಾಕ್-ಇನ್ ಕೂಲರ್, 4 ವಾಕ್ ಇನ್ ಫ್ರೀಜರ್, 3,201 ಐಎಲ್ಆರ್, 3,039 ಡೀಪ್ ಫ್ರೀಜರ್, 46,591 ಲಸಿಕೆ ಕ್ಯಾರಿಯರ್, 2,25,741 ಐಸ್ ಪ್ಯಾಕ್ಗಳು ಲಭ್ಯವಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಅದರೊಂದಿಗೆ 225 ಲೀ. ಸಾಮರ್ಥ್ಯದ 64 ಐಎಲ್ಆರ್ ಕಳುಹಿಸಿಕೊಟ್ಟಿರುವುದಾಗಿಯೂ ಸಚಿವರು ತಿಳಿಸಿದ್ದಾರೆ.
ಈ ಲಸಿಕೆಗಳ ವಿತರಣೆಯ ಹಿನ್ನೆಲೆಯಲ್ಲಿ 6.30 ಲಕ್ಷ ಸಿಬ್ಬಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಜೊತೆಗೆ ಹೆಸರು ನೋಂದಾಯಿಸಿಕೊಳ್ಳುವುದಕ್ಕೆ ಇನ್ನೂ ಅವಕಾಶ ಇದೆ ಎಂದು ಸಚಿವರು ಹೇಳಿದ್ದಾರೆ. ದೇಶದ ನಾನಾ ರಾಜ್ಯಗಳಿಗೆ ಕೇಂದ್ರ ಸರ್ಕಾರ 1 ಕೋಟಿ ಲಸಿಕೆಗಳನ್ನು ವಿತರಣೆ ಮಾಡಲಿರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಕೊರೋನ ವಾರಿಯರ್ಸ್ಗೆ ಮೊದಲ ಆದ್ಯತೆಯಾಗಿ ಲಸಿಕೆ ವಿತರಣೆ ಮಾಡಲಾಗುವುದಾಗಿಯೂ ಅವರು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.