ಬೆಂಗಳೂರು: ರಾಜ್ಯದಲ್ಲಿ ಆಡಳಿತ ಸುಧಾರಣೆಯ ದೃಷ್ಟಿಯಿಂದ ‘ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2’ ಅನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಅವರನ್ನು ಈ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯದ ಆಡಳಿತ ಕಾರ್ಯವೈಖರಿಗಳ ಬಗೆಗಿನ ಮಧ್ಯಂತರ ವರದಿಯನ್ನು ಒಂದು ವರ್ಷದೊಳಗೆ ಮತ್ತು ಅಂತಿಮ ವರದಿಯನ್ನು ಎರಡು ವರ್ಷಗಳ ಒಳಗಾಗಿ ನೀಡುವಂತೆಯೂ ಸರ್ಕಾರ ಈ ನೂತನ ಆಯೋಗಕ್ಕೆ ಸೂಚನೆಯನ್ನು ನೀಡಿದೆ.
ಈ ಆಯೋಗ ರಚನೆಯ ಉದ್ದೇಶಗಳ ಬಗ್ಗೆ ಗಮನಿಸುವುದಾದರೆ, ಇಲಾಖೆಗಳ ಪುನರ್ ರಚನೆ, ಸರ್ಕಾರದ ಎಲ್ಲಾ ಹಂತಗಳಲ್ಲಿನ ಸಿಬ್ಬಂದಿ ಬಲದ ಸಮರ್ಪಕ ಹೊಂದಾಣಿಕೆಗೆ ಶಿಫಾರಸು ಮಾಡುವುದು, ಇಲಾಖೆ, ನಿಗಮ, ಮಂಡಳಿಗಳ ವಿಲೀನತೆ, ತಂತ್ರಜ್ಞಾನಗಳಿಂದಾಗಿ ಹಲವು ಇಲಾಖೆಗಳಲ್ಲಿನ ಅನಗತ್ಯ ಹುದ್ದೆಗಳ ಗುರ್ತು, ಸರ್ಕಾರಿ ಸ್ವಾಮ್ಯದ ಉದ್ಯಮ, ಮಂಡಳಿ, ನಿಗಮಗಳ ಪ್ರಸ್ತುತತೆ, ಸದ್ಯ ಅಸ್ತಿತ್ವದಲ್ಲಿರುವ ಆಡಳಿತ ಮತ್ತು ಆಡಳಿತ ವ್ಯವಸ್ಥೆಯ ಸಮಗ್ರ ಅಧ್ಯಯನ, ಮೌಲ್ಯಮಾಪನ ಮಾಡಿ ಮುಂದಿನ ದಶಕಗಳಿಗೆ ಅನುಗುಣವಾಗಿ ಸೂಕ್ತ ಆಡಳಿತ ವ್ಯವಸ್ಥೆಗೆ ಶಿಫಾರಸ್ಸು ಮಾಡುವುದು ಈ ನೂತನ ಆಯೋಗದ ಕಾರ್ಯಗಳಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.