ಬೆಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ರಾಜ್ಯದ ಯಾವುದೇ ಗ್ರಾಮದಲ್ಲಿ ಗೋ ಹತ್ಯೆ ನಡೆಯುತ್ತಿದ್ದರೂ ತಕ್ಷಣವೇ 1962 ಗೆ ಕರೆ ಮಾಡುವ ಮೂಲಕ ದೂರು ಸಲ್ಲಿಸುವಂತೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ನಿಯಮಗಳ ರಚನೆಗೆ ಪ್ರಧಾನ ಕಾರ್ಯದರ್ಶಿಗಳಿಗೂ ಈಗಾಗಲೇ ಸೂಚನೆ ನೀಡಲಾಗಿದೆ. ಇನ್ನು ಕಸಾಯಿಖಾನೆಗೆ ಒಯ್ಯುವ ಸಂದರ್ಭದಲ್ಲಿ ರಕ್ಷಣೆ ಮಾಡಲ್ಪಟ್ಟ ಗೋವುಗಳನ್ನು ಸಾಕುವುದಕ್ಕೆ ಸಾರ್ವಜನಿಕರು ಮುಂದೆ ಬಂದ ಪಕ್ಷದಲ್ಲಿ ಅಂತಹವರಿಗೆ ಸರ್ಕಾರದ ವತಿಯಿಂದ ಪ್ರೋತ್ಸಾಹ ದೊರೆಯಲಿದೆ ಎಂದು ಚೌಹಾಣ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿರುವ ಆರ್ಥಿಕವಾಗಿ ಹೆಚ್ಚು ಶಕ್ತರಿರುವ ಕುಟುಂಬಗಳು ಇಂತಹ ಗೋವುಗಳ ರಕ್ಷಣೆಗೆ ಮುಂದೆ ಬಂದರೆ ಗೋ ಸಂರಕ್ಷಣೆಗೆ ಮತ್ತಷ್ಟು ಬಲ ಬಂದಂತಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿನ ಗೋವುಗಳ ಸಂರಕ್ಷಣೆಯ ದೃಷ್ಟಿಯಿಂದ ಪಶು ಸಂಜೀವಿನಿ ಸಹಾಯವಾಣಿ 1962 ಇದ್ದು, ಗೋವುಗಳ ಅಕ್ರಮ ಸಾಗಾಟ, ಗೋ ಹತ್ಯೆಗಳಂತಹ ವಿಷಯಗಳು ಗಮನಕ್ಕೆ ಬಂದಲ್ಲಿ ತಕ್ಷಣದಲ್ಲೇ ಈ ಸಂಖ್ಯೆಗೆ ಕರೆ ಮಾಡಿ ದೂರು ನೀಡಬೇಕು. ತಕ್ಷಣದಲ್ಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸುವ ಮೂಲಕ ಇಂತಹ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಾರೆ. ಅದರಂತೆ ಅಕ್ರಮ ಗೋಸಾಗಾಟ ಮಾಡುವವರಿಗೆ ಭಾರೀ ಮೊತ್ತದ ದಂಡವನ್ನು ವಿಧಿಸುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಅಲ್ಲದೆ ರಾಜ್ಯದ ಎಲ್ಲಾ ತಾಲೂಕುಗಳಲ್ಲಿಯೂ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಗೋಶಾಲೆಗಳನ್ನು ತೆರೆಯುವ ನಿಟ್ಟಿನಲ್ಲಿಯೂ ಚಿಂತನೆಗಳು ನಡೆಯುತ್ತಿರುವುದಾಗಿ ಚೌಹಾಣ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.