ಮೈಸೂರು: ಕೊರೋನಾ ಸೋಂಕು ಆರಂಭವಾದ ಬಳಿಕ ರಾಜ್ಯದ ಕೈಗಾರಿಕೋದ್ಯಮ ಕ್ಷೇತ್ರದಲ್ಲಿ ಭಾರೀ ಬೇಡಿಕೆ ಸೃಷ್ಟಿಯಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ.
ಕೃಷಿಕರೊಂದಿಗೆ ಮಾತುಕತೆ ನಡೆಸಿ, ಅವರ ಅಹವಾಲುಗಳನ್ನು ಸ್ವೀಕರಿಸಿ ಬಳಿಕ ಮಾತನಾಡಿದ ಅವರು, ದೇಶದೆಲ್ಲೆಡೆ ಕೊರೋನಾ ಲಾಕ್ಡೌನ್ ಆದ ನಂತರದಲ್ಲಿ ಸುಮಾರು ಮೂರೂವರೆ ಲಕ್ಷ ಕೋಟಿ ರೂ ಗಳಷ್ಟು ಬಂಡವಾಳ ಹೂಡಿಕೆಯ ಪ್ರಸ್ತಾವನೆ ದೇಶ, ವಿದೇಶಗಳಿಂದ ಬಂದಿದೆ. ಕರ್ನಾಟಕಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, 1 ಲಕ್ಷದ 40 ಕೋಟಿ ರೂ. ಗಳಷ್ಟು ಒಟ್ಟು ಹೂಡಿಕೆಗೆ ಭೇಡಿಕೆ ಸೃಷ್ಟಿಯಾಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ದೇಶದ ಒಟ್ಟು ಪ್ರಮಾಣದ 41% ಬಂಡವಾಳವನ್ನು ಕರ್ನಾಟಕ ಸೆಳೆದಿರುವುದು ಸಂತಸದ ವಿಚಾರವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶದ ಉದ್ಯಮಿಗಳು ಮಾತ್ರವಲ್ಲದೆ ವಿದೇಶೀ ಉದ್ಯಮಿಗಳು, ಕೈಗಾರಿಕೆಗಳು ಸಹ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಟ್ಟಿನಲ್ಲಿ ಮುಂದೆ ಬಂದಿದ್ಧಾರೆ. ಕೊರೋನಾ ಸಂದರ್ಭದಲ್ಲಿ ಅವರವರ ಊರಿಗೆ ತೆರಳಿದ್ದ ಕಾರ್ಮಿಕರು ಸಹ ಇದೀಗ ಮತ್ತೆ ತಮ್ಮ ಕಾರ್ಯಕ್ಷೇತ್ರಗಳತ್ತ ಮುಖ ಮಾಡುತ್ತಿದ್ದು, ಇದರಿಂದಾಗಿ ಕಾರ್ಮಿಕರ ಕೊರತೆಯೂ ರಾಜ್ಯದಲ್ಲಿ ಕಾಣಿಸಿಕೊಂಡಿಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಹೂಡಿಕೆಗೆ ಬಂದಿರುವ ಬೇಡಿಕೆಗಳ ಕಾರಣದಿಂದ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಪ್ರಮಾಣ ಹೆಚ್ಚಾಗಲಿದ್ದು, ನಿರುದ್ಯೋಗಿಗಳಿಗೆ ವರದಾನವಾಗಲಿರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.