ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರವು ಭಾರತದ ಸ್ವಾಭಿಮಾನ ಮತ್ತು ಹೆಮ್ಮೆಯ ಸಂಕೇತವಾಗಲಿದೆ ಮತ್ತು ಅದರ ಭೂಮಿ ಪೂಜೆ ಸಮಾರಂಭವು ಭಾರತದ ಇತಿಹಾಸದಲ್ಲಿ ಒಂದು ಮಹತ್ವದ ಘಟ್ಟವಾಗಿದೆ ಎಂದು ಆರ್ಎಸ್ಎಸ್ ಗುರುವಾರ ತಿಳಿಸಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘವು ತನ್ನ ಅಂಗ ಸಂಘಟನೆಗಳ ಮೂಲಕ ದೇವಾಲಯದ ನಿರ್ಮಾಣಕ್ಕೆ ವಿತ್ತೀಯ ಕೊಡುಗೆಯನ್ನು ಸಂಗ್ರಹಿಸಲು ಐದು ಲಕ್ಷ ಗ್ರಾಮಗಳಲ್ಲಿ 10 ಕೋಟಿ ಕುಟುಂಬಗಳೊಂದಿಗೆ ಸಂಪರ್ಕ ಸಾಧಿಸಲಿದೆ ಎಂದು ಆರ್ಎಸ್ಎಸ್ನ ಉನ್ನತ ಮುಖಂಡರೊಬ್ಬರು ತಿಳಿಸಿದ್ದಾರೆ.
ಉರ್ವಾಸಾದ್ ಗ್ರಾಮದಲ್ಲಿ ಮೂರು ದಿನಗಳ ʼಚಿಂತನ ಶಿವಿರ್ʼದಲ್ಲಿ ಆರ್ಎಸ್ಎಸ್, ಜಾತಿ, ಭಾಷೆಯ ಅಡೆತಡೆಗಳನ್ನು ನಿವಾರಿಸಿ ಸಾಮಾಜಿಕ ಸಾಮರಸ್ಯವನ್ನು ಸಾಧಿಸುವತ್ತ ಗಮನ ಹರಿಸುವ ನಿರ್ಣಯ ಕಯಗೊಂಡಿದೆ.
ಈ ಸಭೆಯ ಬಗ್ಗೆ ಮಾಹಿತಿ ನೀಡಿದ ಆರ್ಎಸ್ಎಸ್ ಸಹ ಸರಕಾರ್ಯವಾಹಕ್ ಕೃಷ್ಣ ಗೋಪಾಪ್ ಅವರು, “ಈ ದೇವಾಲಯವು ದೇಶದ ಸ್ವಾಭಿಮಾನ ಮತ್ತು ಹೆಮ್ಮೆಯ ಸಂಕೇತವಾಗಲಿದೆ” ಎಂದಿದ್ದಾರೆ.
ಸಭೆಯಲ್ಲಿ ದೇವಾಲಯ ನಿರ್ಮಾಣ ವಿಷಯಗಳ ಬಗ್ಗೆ ವಿವರವಾಗಿ ಚರ್ಚಿಸಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.