ಬೆಂಗಳೂರು: ರಾಜ್ಯದಲ್ಲಿ 2030 ರ ಒಳಗಾಗಿ 17 ಸುಸ್ಥಿರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಸಮರ್ಪಕವಾದ ಕಾರ್ಯಯೋಜನೆಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಪ್ರಥಮ ಯೋಜನಾ ಮಂಡಳಿಯ ಸಭೆಯಲ್ಲಿ ಮಾತನಾಡಿದ ಅವರು, 17 ರೀತಿಯ ಸುಸ್ಥಿರ ಅಭಿವೃದ್ಧಿಗಳಿಗೆ ಸಂಬಂಧಿಸಿದಂತೆ 100% ದಲ್ಲಿ 66% ಅಂಕಗಳನ್ನು ಪಡೆದು ದೇಶದಲ್ಲೇ 6 ನೇ ಸ್ಥಾನದಲ್ಲಿದೆ. ರಾಜ್ಯವನ್ನು ಹಸಿವು ಮುಕ್ತ, ಬಡತನ ಮುಕ್ತ, ಲಿಂಗ ಸಮಾನತೆಯ, ಮೂಲಸೌಕರ್ಯ, ಕೈಗಾರಿಕೆ, ನಾವೀನ್ಯತೆಗೆ ಸಂಬಂಧಿಸಿದಂತೆ, ಸುಸ್ಥಿರ ನಗರಗಳು ಮತ್ತು ಸಮುದಾಯಗಳ ವಿಚಾರದಲ್ಲಿ ನಿರೀಕ್ಷಿತ ಗುರಿಯನ್ನು ಸಾಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಸಾಧಿಸಲು ಹೊರಟಿರುವ ಎಲ್ಲಾ ಗುರಿಗಳಿಗೂ ಸಂಬಂಧಿಸಿದಂತೆ ವಿಷಯಾವಾರು ತಜ್ಞರ ಅಧ್ಯಯನ ,ಅಭಿಪ್ರಾಯ, ಸಲಹೆ ಮತ್ತು ಸೂಚನೆಗಳನ್ನು ಪಡೆದುಕೊಂಡೇ ಮುಂದಡಿ ಇಡಲಾಗುವುದು. ಈ ಎಲ್ಲಾ ರೀತಿಯಲ್ಲೂ ವರದಿಗಳನ್ನು ತಯಾರಿಸಿ ಅದನ್ನು ಸರ್ಕಾರಕ್ಕೆ ನೀಡುವಂತೆ ರಾಜ್ಯ ಯೋಜನಾ ಮಂಡಳಿಗೂ ಸೂಚಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.