ನವದೆಹಲಿ: ವಿಶ್ವದ ಅತಿದೊಡ್ಡ ಸ್ಥಳಾಂತರ ಕಾರ್ಯಾಚರಣೆ ಎಂದು ಕರೆಯಲ್ಪಡುವ ವಂದೇ ಭಾರತ್ ಮಿಷನ್ ಅಡಿಯಲ್ಲಿ ಇದುವರೆಗೆ 44.7 ಲಕ್ಷ ಜನರನ್ನು ವಿದೇಶಗಳಿಂದ ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ.
2020 ರ ಮೇ ತಿಂಗಳಿನಿಂದ ಈ ಕಾರ್ಯಾಚರಣೆಯನ್ನು ಆರಂಭಿಸಲಾಯಿತು. ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಸ್ಥಗಿತ ಗೊಂಡಿದ್ದ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಅನಿವಾಸಿ ಭಾರತೀಯರನ್ನು ತವರಿಗೆ ಮರಳಿ ಕರೆತರಲು ಈ ಕಾರ್ಯಾಚರಣೆಯನ್ನು ಆರಂಭಮಾಡಿತ್ತು.
ವಂದೇ ಭಾರತ್ ಮಿಷನ್ನ 9ನೇ ಹಂತವನ್ನು ಈ ತಿಂಗಳ 1 ರಿಂದ ಕಾರ್ಯರೂಪಕ್ಕೆ ತರಲಾಗಿದ್ದು, 1,495 ಅಂತರರಾಷ್ಟ್ರೀಯ ವಿಮಾನಯಾನಗಳನ್ನು ನಿಗದಿಪಡಿಸಲಾಗಿದ್ದು, ಇವು 24 ದೇಶಗಳಿಂದ ಕಾರ್ಯನಿರ್ವಹಿಸಲಿವೆ.
2.8 ಲಕ್ಷ ಜನರಿಗೆ ಮರಳಲು ಅನುಕೂಲವಾಗಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಇಂದು ತಿಳಿಸಿದ್ದಾರೆ. ಬುಧವಾರದ ವೇಳೆಗೆ, ಈ ಪೈಕಿ 261 ವಿಮಾನಗಳನ್ನು ನಡೆಸಲಾಗಿದ್ದು, 19 ದೇಶಗಳಿಂದ 49 ಸಾವಿರ ಜನರಿಗೆ ಮರಳಲು ಅನುಕೂಲವಾಗಿದೆ ಎಂದು ಅವರು ಹೇಳಿದರು. ವಂದೇ ಭಾರತ್ ಮಿಷನ್ ಅನ್ನು 2020 ರ ಮೇ ತಿಂಗಳಿನಿಂದ ಆರಂಭಿಸಲಾಗಿದ್ದು, ಇಲ್ಲಿಯವರೆಗೆ 44.7 ಲಕ್ಷಕ್ಕೂ ಹೆಚ್ಚು ಜನರನ್ನು ಮರಳಿ ತರಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.