ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಶನಿವಾರ ಚುನಾವಣಾ ಕಣ ಪಶ್ಚಿಮ ಬಂಗಾಳದ ಬುರ್ದ್ವಾನ್ನಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ರೈತರ ಬೆಳವಣಿಗೆ, ಪ್ರಗತಿ ಮತ್ತು ಸಮೃದ್ಧಿಗೆ ತಮ್ಮ ಪಕ್ಷದ ಬದ್ಧತೆಯನ್ನು ಒತ್ತಿಹೇಳುವ ಉದ್ದೇಶದಿಂದ ಮನೆ-ಮನೆಯಿಂದ ಅಕ್ಕಿ ಸಂಗ್ರಹ ಅಭಿಯಾನಕ್ಕೆ ಆರಂಭ ನೀಡಲಿದ್ದಾರೆ.
ಪಕ್ಷದ ಮುಖ್ಯ ವಕ್ತಾರ ಅನಿಲ್ ಬಲೂನಿ ಈ ಬಗ್ಗೆ ಮಾತನಾಡಿ, ನಡ್ಡಾ ತಮ್ಮ ದಿನವಿಡೀಯ ರಾಜ್ಯ ಪ್ರವಾಸದಲ್ಲಿ ಜಗದಾನಂದಪುರ ಗ್ರಾಮದ ರೈತರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಲಿದ್ದಾರೆ ಎಂದಿದ್ದಾರೆ.
ನಡ್ಡಾ ಅವರು ಬುರ್ದ್ವಾನ್ ಕ್ಲಾಕ್ ಟವರ್ನಿಂದ ಬುರ್ದ್ವಾನ್ನ ಲಾರ್ಡ್ ಕರ್ಜನ್ ಗೇಟ್ ವರೆಗೆ ರೋಡ್ ಶೋ ನಡೆಸಲಿದ್ದಾರೆ ಮತ್ತು ಪತ್ರಿಕಾಗೋಷ್ಠಿಯಲ್ಲಿಯೂ ಮಾತನಾಡಲಿದ್ದಾರೆ.
ಜಗದಾನಂದಪುರದಲ್ಲಿ ನಡೆಯಲಿರುವ “ಕ್ರಿಶೋಕ್ ಸುರೋಖ ಗ್ರಾಮ ಸಭೆ” (ರೈತರ ಭದ್ರತಾ ಗ್ರಾಮ ಸಭೆ) ಯಲ್ಲಿ ಅವರು ಮಾಡುವ ಭಾಷಣವು ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದಾದ್ಯಂತ ಬಿಜೆಪಿ ನಡೆಸಲಿರುವ ಇಂತಹ 40,000 ಸಭೆಗಳ ಆರಂಭವನ್ನು ಸೂಚಿಸುತ್ತದೆ ಎಂದು ಬಲೂನಿ ಹೇಳಿದ್ದಾರೆ.
ರೈತರಿಂದ ಮುಷ್ಟಿ ಅಕ್ಕಿ ಸಂಗ್ರಹಿಸುವ ಯೋಜನೆಯ ಭಾಗವಾಗಿ, ರಾಜ್ಯಾದ್ಯಂತ ಎಲ್ಲಾ 73 ಲಕ್ಷ ಗ್ರಾಮಸ್ಥರ ಮನೆಗಳಿಗೆ ತಲುಪಲು ಬಿಜೆಪಿ ಯೋಜಿಸಿದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ 10 ವರ್ಷದ ಆಳ್ವಿಕೆಯನ್ನು ಕೊನೆಗೊಳಿಸುವ ಉದ್ದೇಶದಿಂದ ಕೇಸರಿ ಪಕ್ಷವು ರಾಜ್ಯದಲ್ಲಿ ಆಕ್ರಮಣಕಾರಿ ಅಭಿಯಾನವನ್ನು ಪ್ರಾರಂಭಿಸಿದೆ.
ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸುವ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಬ್ಯಾನರ್ಜಿ ಅವರಿಗೆ ಸೆಡ್ಡು ಹೊಡೆಯಲು ಈ ಕಾಯ್ದೆಗಳ ಪ್ರಯೋಜನಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಬಿಜೆಪಿ ತಯಾರಿ ಮಾಡಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.