ಮುಂಬಯಿ: ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮವಾಗಿ ಹತ್ತು ಮಂದಿ ನವಜಾತ ಶಿಶುಗಳು ಸಾವನ್ನಪ್ಪಿವೆ.
ವರದಿಗಳ ಪ್ರಕಾರ, ಆಸ್ಪತ್ರೆಯ ವಿಶೇಷ ನವಜಾತ ಆರೈಕೆ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಎಲ್ಲಾ ಶಿಶುಗಳು ಒಂದು ತಿಂಗಳು ಮತ್ತು ಮೂರು ತಿಂಗಳ ವಯಸ್ಸಿನವು ಎಂದು ವೈದ್ಯರು ತಿಳಿಸಿದ್ದಾರೆ.
ಭಂಡಾರ ಜಿಲ್ಲಾ ಆಸ್ಪತ್ರೆಯಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟಕದಲ್ಲಿ 17 ಶಿಶುಗಳಿದ್ದು, ಏಳು ಮಕ್ಕಳನ್ನು ರಕ್ಷಿಸಲಾಗಿದೆ.
ಆಸ್ಪತ್ರೆಯ ನವಜಾತ ವಿಭಾಗದಿಂದ ಹೊಗೆ ಬರುತ್ತಿರುವುದನ್ನು ನರ್ಸ್ ಮೊದಲು ಗಮನಿಸಿದರು, ತಕ್ಷಣವೇ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಈ ಬಗ್ಗೆ ಎಚ್ಚರಿಸಿದರು. ತಕ್ಷಣವೇ ಐದು ನಿಮಿಷಗಳಲ್ಲಿ ಅಲ್ಲಿಗೆ ತಲುಪಿದ ವೈದ್ಯರು ಮತ್ತು ಇತರ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಏಳು ಶಿಶುಗಳನ್ನು ಘಟಕದ ‘ಒಳಬರುವ ವಾರ್ಡ್’ನಿಂದ ರಕ್ಷಿಸಿದರೂ ಇತರ 10 ಶಿಶುಗಳನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು.
ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿಯ ಅವಘಡ ಸಂಭವಿಸಲು ಕಾರಣ ತಿಳಿದುಬಂದಿಲ್ಲ ಆದರೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನ ಪರಿಣಾಮವಾಗಿರಬಹುದು ಎಂದು ನಂಬಲಾಗಿದೆ ಎಂದಿದ್ದಾರೆ.
ಬೆಂಕಿಯ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, “ಮಹಾರಾಷ್ಟ್ರದ ಭಂಡಾರದಲ್ಲಿ ಹೃದಯ ವಿದ್ರಾವಕ ದುರಂತ ನಡೆದಿದೆ, ನಾವು ಅಮೂಲ್ಯವಾದ ನವ ಜೀವಗಳನ್ನು ಕಳೆದುಕೊಂಡಿದ್ದೇವೆ. ದುಖಃತಪ್ತ ಕುಟುಂಬಗಳಿಗೆ ಸಂತಾಪ ” ಎಂದು ಟ್ವೀಟ್ ಮಾಡಿದ್ದಾರೆ.
Heart-wrenching tragedy in Bhandara, Maharashtra, where we have lost precious young lives. My thoughts are with all the bereaved families. I hope the injured recover as early as possible.
— Narendra Modi (@narendramodi) January 9, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.