ಬೆಳಗಾವಿ: ಕರ್ನಾಟಕದಲ್ಲಿ ಕನ್ನಡ ಧ್ವಜ ಹಾರಿಸುವುದು ಕನ್ನಡಿಗರ ಹಕ್ಕು. ಅದಕ್ಕೆ ವಿರೋಧ ವ್ಯಕ್ತಪಡಿಸುವ ಹಕ್ಕು ಯಾರಿಗೂ ಇಲ್ಲ. ಅದನ್ನು ತೆರವುಗೊಳಿಸಲು ಹೇಳುವ ಯಾವುದೇ ಹಕ್ಕು ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಇಲ್ಲ. ಹಾಗೂ ಮಾತನಾಡುವುದಿದ್ದರೆ ಅವರು ಮಹಾರಾಷ್ಟ್ರಕ್ಕೆ ಹೋಗಿ ಮಾತನಾಡಲಿ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ನಗರದ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಹಾರಿಸಲಾಗಿರುವ ಕನ್ನಡ ಧ್ವಜವನ್ನು ಜ. 21 ರ ಮುನ್ನ ತೆರವು ಮಾಡಬೇಕು ಎಂದು ಎಂಇಎಸ್ ಬೆದರಿಕೆ ಒಡ್ಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಎಂಇಎಸ್ ಎಲ್ಲೆ ಮೀರಿ ವರ್ತಿಸಿದರೆ ಅದರ ಸದಸ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು ಎಂದು ಸವದಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದಲ್ಲಿ ಕನ್ನಡ ಧ್ವಜವನ್ನು ಯಾರು ಬೇಕಾದರೂ, ಎಲ್ಲಿ ಬೇಕಾದರೂ ಹಾರಿಸಬಹುದು. ಆ ಸ್ವಾತಂತ್ರ್ಯ ಕನ್ನಡಿಗರಿಗೆ ಇದೆ. ಹೀಗಿರುವಾಗ ಇದನ್ನು ವಿರೋಧಿಸುವ ಅಥವಾ ತೆರವುಗೊಳಿಸುವಂತೆ ಬೆದರಿಕೆ ಒಡ್ಡುವ ಎಂಇಎಸ್ ಕ್ರಮ ಸರಿಯಾದುದಲ್ಲ ಎಂದು ಸವದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.