ನವದೆಹಲಿ: ಕೇಂದ್ರವು ಶೀಘ್ರದಲ್ಲೇ ದೇಶಾದ್ಯಂತ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ‘ನಿಮ್ಮ ಸಂವಿಧಾನವನ್ನು ತಿಳಿದುಕೊಳ್ಳಿ’ ಎಂಬ ಅಭಿಯಾನವನ್ನು ನಡೆಸಲಿದೆ ಎಂದು ಶುಕ್ರವಾರ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.
‘ಪಂಚಾಯತ್ ರಾಜ್ ವ್ಯವಸ್ಥೆ – ವಿಕೇಂದ್ರೀಕೃತ ಪ್ರಜಾಪ್ರಭುತ್ವವನ್ನು ಸಶಕ್ತಗೊಳಿಸುವುದು’ ಎಂಬ ವಿಷಯದ ಕುರಿತು ಉತ್ತರಾಖಂಡ ಪಂಚಾಯತಿ ರಾಜ್ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿರ್ಲಾ ಮಾತನಾಡಿದ ವೇಳೆ ಈ ಮಾಹಿತಿಯನ್ನು ನೀಡಿದ್ದಾರೆ.
ಸಂವಿಧಾನವು ನೀಡಿರುವ ಹಕ್ಕುಗಳ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿದೆ, ಆದರೆ ಕರ್ತವ್ಯಗಳ ಬಗ್ಗೆ ತಿಳಿದಿಲ್ಲ. ಸರ್ಕಾರದ ಈ ಉಪಕ್ರಮವು ಕರ್ತವ್ಯಗಳ ಮಹತ್ವವನ್ನು ವಿವರಿಸುತ್ತದೆ ಮತ್ತು ಸಂವಿಧಾನದ ವಿವಿಧ ಅಂಶಗಳ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡುತ್ತದೆ ಇಂದು ಬಿರ್ಲಾ ಹೇಳಿದ್ದಾರೆ.
ಸ್ಪೀಕರ್ ಅವರು ಪಂಚಾಯತಿ ರಾಜ್ ಪದ್ಧತಿಯ ಮಹತ್ವವನ್ನು ಎತ್ತಿ ತೋರಿಸಿದರು ಮತ್ತು ಇದು ವೈದಿಕ ಕಾಲದಿಂದಲೂ ನಮ್ಮ ದೇಶದಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಿದರು.
ಪಂಚಾಯತಿ ರಾಜ್ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ದೆಹಲಿಯಲ್ಲಿ ಶೀಘ್ರದಲ್ಲೇ ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರು, ಮಹಾನಗರ ಪಾಲಿಕೆ ಮತ್ತು ಪುರಸಭೆಯ ಕಾರ್ಯಕ್ರಮವೊಂದನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದರು. ಇದು ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳನ್ನು ಸಾರ್ವಜನಿಕರ ಬಗ್ಗೆ ಹೆಚ್ಚು ಜವಾಬ್ದಾರಿಯುತವಾಗಿಸುತ್ತದೆ, ಅದು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಬಲಪಡಿಸುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.