ಉಡುಪಿ: ರಾಜ್ಯದಲ್ಲಿ ಮೀನುಗಾರಿಕಾ ಬೋಟ್ಗಳಿಗೆ ಪ್ರಧಾನಿ ಮೋದಿ ಅವರ ಕಲ್ಪನೆಯ ಆತ್ಮನಿರ್ಭರ ಭಾರತದ ಆಶಯಗಳಿಗೆ ಅನುಗುಣವಾಗಿ, ಸ್ವದೇಶಿ ನಿರ್ಮಿತ ಯಂತ್ರಗಳನ್ನು ಬಳಕೆ ಮಾಡಲು ಚಿಂತನೆ ನಡೆಸಿರುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸದ್ಯ ಚೀನಾ ನಿರ್ಮಿತ ಯಂತ್ರಗಳನ್ನು ಮೀನುಗಾರಿಕಾ ಬೋಟ್ಗಳಿಗೆ ಬಳಕೆ ಮಾಡಲಾಗುತ್ತಿದೆ. ಅವುಗಳಿಗೆ ಪರ್ಯಾಯವಾಗಿ ಮುಂದಿನ ದಿನಗಳಲ್ಲಿ ಸ್ವದೇಶೀ ನಿರ್ಮಿತ ಯಂತ್ರಗಳನ್ನು ಬಳಕೆ ಮಾಡಲಾಗುವುದು. ರಾಜ್ಯದ ಕರಾವಳಿ ಭಾಗದಲ್ಲಿ 22,500 ರಷ್ಟು ಮೀನುಗಾರಿಕಾ ಬೋಟ್ಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ 90% ಬೋಟ್ಗಳು ಚೀನಾ ನಿರ್ಮಿತ ಯಂತ್ರಗಳ ಸಹಾಯದಿಂದ ಕಾರ್ಯಾಚರಿಸುತ್ತಿವೆ. ಮೀನುಗಾರರು ದೇಶೀಯ ಯಂತ್ರಗಳನ್ನು ಬೋಟ್ಗಳಲ್ಲಿ ಬಳಕೆ ಮಾಡುವುದಕ್ಕೆ ಹೆಚ್ಚು ಉತ್ಸಾಹ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ದೇಶೀಯ ಕಂಪೆನಿಗಳ ತಂತ್ರಜ್ಞರ ಜೊತೆಗೆ ಯಂತ್ರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಗಿದೆ ಎಂದು ಪೂಜಾರಿ ಮಾಹಿತಿ ನೀಡಿದ್ದಾರೆ.
ಚರ್ಚೆಯಲ್ಲಿ ಭಾಗವಹಿಸಿದ ದೇಶೀಯ ಕಂಪೆನಿಗಳು ಮೂರು ತಿಂಗಳೊಳಗಾಗಿ ಅನಿಲ ಆಧಾರಿತ ಮಾದರಿ ಯಂತ್ರಗಳನ್ನು ಸಿದ್ಧಪಡಿಸುವ, ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನೀಡುವುದಾಗಿ ಸರ್ಕಾರಕ್ಕೆ ಭರವಸೆಯನ್ನು ನೀಡಿರುವುದಾಗಿಯೂ ಸಚಿವರು ಮಾಹಿತಿ ನೀಡಿದ್ದಾರೆ. ಇದಕ್ಕೆ ಕೊಚ್ಚಿನ್ ಯಾರ್ಡ್ಶಿಪ್ ಅಧಿಕಾರಿಗಳಿಂದಲೂ ಪೂರಕ ಸ್ಪಂದನೆ ದೊರಕಿದೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.