ನವದೆಹಲಿ: ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು ತಮ್ಮ ಭಾರತ ಭೇಟಿಯನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ, ಭಾರತದ ಮೂಲದ ಸುರಿನಾಮ್ ಗಣರಾಜ್ಯದ ಅಧ್ಯಕ್ಷ ಚಂದ್ರಿಕಾಪರ್ಸಾದ್ ಸಂತೋಖಿ ಅವರು ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ವರದಿಯ ಪ್ರಕಾರ, ಸಂತೋಖಿ ಜನವರಿ 26 ರಂದು ರಾಜ್ಪತ್ನಲ್ಲಿ ನಡೆಯುವ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವಾರದ ಆರಂಭದಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್ನಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು ಮತ್ತು ಮುಖ್ಯ ಭಾಷಣ ಮಾಡಿದ್ದರು ಮತ್ತು ಭಾರತ ಮತ್ತು ಸುರಿನಾಮ್ ನಡುವೆ ವೀಸಾ ಪರವಾನಗಿಯನ್ನು ಕೊನೆಗೊಳಿಸಲು ಇಚ್ಛೆ ವ್ಯಕ್ತಪಡಿಸಿದ್ದರು.
ಸಂತೋಖಿ ಜುಲೈ, 2020 ರಲ್ಲಿ ಸುರಿನಾಮ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು. ಭಾರತದ ಬಗ್ಗೆ ಅತೀವ ಹೆಮ್ಮೆ ಮತ್ತು ಗೌರವವನ್ನು ಇವರು ಇಟ್ಟುಕೊಂಡಿದ್ದಾರೆ.
ಗಣರಾಜ್ಯೋತ್ಸವದ ಮೆರವಣಿಗೆಯ ಮುಖ್ಯ ಅತಿಥಿಯಾಗುವಂತೆ ಭಾರತ ಈ ಹಿಂದೆ ಯುಕೆ ಪಿಎಂ ಬೋರಿಸ್ ಜಾನ್ಸನ್ರನ್ನು ಆಹ್ವಾನಿಸಿತ್ತು. ಇದಕ್ಕೆ ಸಮ್ಮತಿಯನ್ನೂ ಸೂಚಿಸಿದ್ದರು. ಆದರೆ, ಯುಕೆಯಲ್ಲಿ ಹೊಸ ಕೊರೊನಾವೈರಸ್ ಪತ್ತೆಯಾದ ನಂತರ ಅವರು ಭೇಟಿ ರದ್ದುಪಡಿಸಿದರು. ಜಾನ್ಸನ್ ಅವರು ಪಿಎಂ ನರೇಂದ್ರ ಮೋದಿಯವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ ಭಾರತಕ್ಕೆ ಪ್ರಯಾಣಿಸದಿರುವ ತಮ್ಮ ಅಸಮರ್ಥತೆಯ ಬಗ್ಗೆ ತಿಳಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.