ನವದೆಹಲಿ: ಕಲ್ಲಿದ್ದಲು ಗಣಿಗಾರಿಕೆಗೆ ಮೂಲಕ ಅನುಮತಿ ಪಡೆಯಲು ಅವಕಾಶ ಕಲ್ಪಿಸುವ ‘ಏಕ ಗವಾಕ್ಷಿ ಅನುಮತಿ ವ್ಯವಸ್ಥೆ’- ಆನ್ ಲೈನ್ ವೇದಿಕೆಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಾಲನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅಮಿತ್ ಶಾ ಅವರು, “2024 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಕಲ್ಲಿದ್ದಲು ವಲಯವು ಹೆಚ್ಚಿನ ಕೊಡುಗೆ ನೀಡುವ ಸಾಮರ್ಥ್ಯವನ್ನು ಹೊಂದಿದೆ” ಎಂದಿದ್ದಾರೆ.
ಕಳೆದ ಆರು ವರ್ಷಗಳಲ್ಲಿ ದೇಶದಲ್ಲಿ ಕಲ್ಲಿದ್ದಲು ಉತ್ಪಾದನೆಯು ಅನೇಕ ಪಟ್ಟು ಹೆಚ್ಚಾಗಿದೆ. ಆತ್ಮನಿರ್ಭರ ಭಾರತ ಕುರಿತು ಪ್ರಧಾನ ಮಂತ್ರಿಯ ಕಲ್ಪನೆಯನ್ನು ಹೆಚ್ಚಿಸುವ ಸಾಮರ್ಥ್ಯವೂ ಈ ವಲಯಕ್ಕೆ ಇದೆ ಎಂದು ಅವರು ಪ್ರತಿಪಾದಿಸಿದರು.
ಕಳೆದ ಆರು ವರ್ಷಗಳಲ್ಲಿ ಎನ್ಡಿಎ ಸರ್ಕಾರವು ಪರಿಚಯಿಸಿದ ಮಹತ್ವದ ಸುಧಾರಣೆಗಳ ಸರಣಿಯನ್ನು ಉಲ್ಲೇಖಿಸಿದ ಶಾ ಅವರು, ಕಲ್ಲಿದ್ದಲು ವಲಯದಲ್ಲಿನ ಪಾರದರ್ಶಕತೆ ತರಲಾಗಿದೆ ಮತ್ತು ವ್ಯವಹಾರದ ಸುಲಭತೆಯನ್ನು ಹೆಚ್ಚಿಸಲು ಅಡೆತಡೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಿದರು.
ವಾಣಿಜ್ಯ ಗಣಿಗಾರಿಕೆಯ ನೀತಿಯು ರಾಜ್ಯಗಳಿಗೆ ಹೆಚ್ಚುವರಿ ಆರ್ಥಿಕ ಪ್ರಚೋದನೆಯನ್ನು ನೀಡುತ್ತದೆ ಮತ್ತು ಸುಮಾರು 70 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ಕಲ್ಲಿದ್ದಲು ಆಮದಿನ ಮೇಲಿನ ಅವಲಂಬನೆಯನ್ನು ಮತ್ತಷ್ಟು ಕಡಿಮೆ ಮಾಡಲು ಮತ್ತು ಉದಯೋನ್ಮುಖ ಕ್ಷೇತ್ರಗಳ ಇಂಧನ ಬೇಡಿಕೆಗಳನ್ನು ಈಡೇರಿಸಲು ಕಲ್ಲಿದ್ದಲು ಉತ್ಪಾದನೆಯನ್ನು ಉತ್ತೇಜಿಸಲು ಗಣಿಗಾರಿಕೆ ಕಂಪನಿಗಳಿಗೆ ಶಾ ಒತ್ತಾಯಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.