ಬೆಂಗಳೂರು: ಜ. 15 ರಿಂದ ತೊಡಗಿದಂತೆ ರಾಜ್ಯದಲ್ಲಿ ಪದವಿ, ಸ್ನಾಥಕೋತ್ತರ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ತರಗತಿಗಳ ಎಲ್ಲಾ ವರ್ಷಗಳ ವಿದ್ಯಾರ್ಥಿಗಳಿಗೂ ಆಫ್ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಮಾಹಿತಿ ನೀಡಿದ್ದಾರೆ.
ಈ ವಿಚಾರವಾಗಿ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾತನಾಡಿ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಫ್ಲೈನ್ ತರಗತಿಗಳು ಆರಂಭವಾಗಿದ್ದು, ಯಶಸ್ವಿಯಾಗಿ ನಡೆಯುತ್ತಿವೆ. ಈ ತಿಂಗಳಿನಿಂದ ಉಳಿದ ವಿದ್ಯಾರ್ಥಿಗಳಿಗೂ ಭೌತಿಕ ತರಗತಿಗಳನ್ನು ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಎಂಜಿನಿರಿಂಗ್ ವಿದ್ಯಾರ್ಥಿಗಳಿಗೂ ಸಹ ಇದೇ ದಿನದಿಂದ ನೇರ ತರಗತಿಗಳನ್ನು ಆರಂಭ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾಲೇಜುಗಳಲ್ಲಿ ಬೌತಿಕ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಗಳನ್ನು ಸಹ ತೆರೆಯಲಾಗುತ್ತದೆ. ಅಲ್ಲದೆ ವಿದ್ಯಾರ್ಥಿಗಳ ಪ್ರಯಾಣದ ಅನುಕೂಲಕ್ಕಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗುತ್ತದೆ. ಈ ಎಲ್ಲಾ ವಿಚಾರಗಳಿಗೆ ಪೂರಕವಾಗಿ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಸಹ ಅನುಸರಿಸಲಾಗುತ್ತದೆ. ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧಾರಣೆ, ಸ್ಯಾನಿಟೈಸಿಂಗ್ ಪ್ರಕ್ರಿಯೆಗಳನ್ನು ಸಹ ನಡೆಸಲಾಗುತ್ತದೆ ಎಂದು ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಪ್ರಯಾಣದ ಅನುಕೂಲತೆಯನ್ನು ಗಮನಿಸಿಕೊಂಡು ಶೀಘ್ರದಲ್ಲೇ ತ್ವರಿತವಾಗಿ ಬಸ್ ಪಾಸ್ ವಿತರಣೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೂ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಏಕಕಾಲಕ್ಕೆ ಆಆಫ್ಲೈನ್ ನಲ್ಲಿಯೇ ಪರೀಕ್ಷೆ ನಡೆಸುವುದಕ್ಕೂ ದಿನಾಂಕಗಳನ್ನು ಅಂತಿಮಗೊಳಿಸಲಾಗುವುದು ಎಂದು ಅಶ್ವತ್ಥ್ ನಾರಾಯಣ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.