ಬೆಂಗಳೂರು: ಬಸವನಗುಡಿಯಲ್ಲಿರುವ ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದ ಸ್ವಾಮಿ ಹರ್ಷಾನಂದಜೀ ಮಹರಾಜ್ (91) ಅವರು ಇಂದು ಮಧ್ಯಾಹ್ನ 1.05 ರ ವೇಳೆಗೆ ದೈವಾಧೀನರಾಗಿದ್ದಾರೆ.
ಅವರು ರಾಮಕೃಷ್ಣ ಪರಮಹಂಸ ಮತ್ತು ಸ್ವಾಮಿ ವಿವೇಕಾನಂದರ ತತ್ವ, ಚಿಂತನೆಗಳನ್ನು ಸಮಾಜಕ್ಕೆ ತಿಳಿಸುವ ಕೆಲಸವನ್ನು ಮಾಡುತ್ತಿದ್ದರು. ಮಂಗಳೂರು, ಮೈಸೂರು ಮತ್ತು ಅಲಹಾಬಾದ್ ರಾಮಕೃಷ್ಣ ಮಠಗಳಲ್ಲಿಯೂ ಸೇವೆ ಸಲ್ಲಿಸಿರುವ ಇವರು ‘ವಿವರಣಾತ್ಮಕ ಹಿಂದೂ ವಿಶ್ವಕೋಶ’ ಎಂಬ ಪುಸ್ತಕವನ್ನು ಬರೆದಿದ್ದು, ಈ ಪುಸ್ತಕ ಮೂರು ಸಂಪುಟಗಳಲ್ಲಿ ಪ್ರಕಟವಾಗಿದೆ.
ಉತ್ತಮ ವಾಗ್ಮಿಗಳೂ ಆಗಿದ್ದ ಸ್ವಾಮೀಜಿ ಅವರ ಅಗಲುವಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇನ್ನೂ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪಾರ್ಥಿವ ಶರೀರದ ದರ್ಶನಕ್ಕೆ ಇಂದು ಸಂಜೆ 5 ರಿಂದ 8 ಗಂಟೆಯ ವರೆಗೆ ಮತ್ತು ನಾಳೆ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರ ವರೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ ಎಂದು ಮಠದ ಮೂಲಗಳು ಮಾಹಿತಿ ನೀಡಿವೆ.
ಬೆಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ಅವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ರಾಮಕೃಷ್ಣ ಪರಮಹಂಸ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಎತ್ತಿ ಹಿಡಿದ ವಿದ್ವಾಂಸರು, ಉತ್ತಮ ವಾಗ್ಮಿಗಳೂ ಆಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. (1/2)
— CM of Karnataka (@CMofKarnataka) January 12, 2021
Swami Harshananda, President of Ramakrishna Math, Bengaluru was walking encyclopaedia of Hinduism.
A gentle soul, he guided thousands of people, young & old, on path of Dharma.
Leaving behind his mortal coir, he joins Swami Vivekananda, today on his Janma Jayanti.
Om Shanti. pic.twitter.com/0rzjO29YHR
— Tejasvi Surya (@Tejasvi_Surya) January 12, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.